BREAKING NEWS

ಜಗತ್ತಿನ ಮೂರು-ನಾಲ್ಕು ಪ್ರಧಾನಿಗಳ ಸಾವಾಗುತ್ತದೆ : ಕೋಡಿಶ್ರೀ ಭವಿಷ್ಯ

ಧಾರವಾಡ : ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಭವಿಷ್ಯ ನುಡಿದಿದ್ದ ಕೋಡಿ ಶ್ರೀಗಳಾದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಮತ್ತೆ ಜಗತ್ತಿನಲ್ಲಿ ಮೂರು-ನಾಲ್ಕು ಪ್ರಧಾನಿಗಳು ಸಾಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿರುವ ಅವರು, ಭಾರತೀಯ ಪದ್ಧತಿಯಲ್ಲಿ ಸಂವತ್ಸರಗೀಗ ಮಹತ್ವ ಇದೆ. ಸಧ್ಯ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ ಸಂದರ್ಭದಲ್ಲಿ ಒಳತಿಗಿಂತ ಹೆಚ್ಚಾಗಿ ಕೆಡಕೆ ಹೆಚ್ಚು ಎಂದು ತಿಳಿಸಿದ್ದಾರೆ.

ಪಂಚಭೂತಗಳಿಂದ ತೊಂದರೆ ಎದುರಾಗಲಿದೆ. ಭೂ ಕುಸಿತ, ಜಲಪ್ರಳಯದ ಲಕ್ಷಣಗಳು ಇದೆ. ಅಲ್ಲದೇ ಗಾಳಿಯಿಂದಲೂ ತೊಂದರೆ, ಆಕಾಶ ತತ್ವ ಆಗಲಿದೆ. ಈಗಲೆ ಅಶುಭ ನುಡಿಯಬಾರದು . ಶುಭವೋ ಅಶುಭವೋ ಎಂದು ಶ್ರವಣದಲ್ಲಿ ಹೇಳುವೆ ಎಂದು ತಿಳಿಸಿದ್ದಾರೆ.

ರಾಜಕೀಯದ ಬಗ್ಗೆ ಮಾತನಾಡಿದ ಅವರು, ರಾಷ್ಟ್ರದಲ್ಲಿ ಅಧಿಕಾರದ ಉದ್ದೇಶದಿಂದ ಕೂಡಿದ್ದಾರೆ. ಇನ್ನೂ ಅಂಗಡಿ ಓಪನ್‌ ಆಗಿಲ್ಲ. ವ್ಯಾಪಾರ ಶುರುವಾಗಿಲ್ಲ. ಆ ಬಳಿಕ ರಾಷ್ಟ್ರ ರಾಜಕಾರಣದ ಭವಿಷ್ಯ ಹೇಳುವೆ ಎಂದರು.

ಜಗತ್ತಿನ್ಲ್ಲಿ ಎರಡು, ಮೂರು ಪ್ರಧಾನಿಗಳ ಸಾವು ಆಗಲಿದೆ. ದೊಡ್ಡ ದೊಡ್ಡವರಿಗೆ ನೋವು ತಾಪ ದುಃಖಾಗಲಿದೆ ಎಂದು ತಿಳಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

3 mins ago

ಹಂಗಾಮಿ ನೌಕರರ ಬದುಕಿಗೆ ಭದ್ರತೆ ನೀಡಿದ ಮಂಡ್ಯ ಜಿಪಂ

ಬಿ.ಟಿ.ಮೋಹನ್‌ಕುಮಾರ್ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯಿತಿಗಳಲ್ಲಿ ಸದ್ದಿಲ್ಲದೆ ಸೇವೆ ಸಲ್ಲಿಸುತ್ತಾ, ನಮ್ಮ ಹಳ್ಳಿಗಳ ಪ್ರತಿ…

8 mins ago

ಶ್ರೀಕಂಠನ ಸನ್ನಿಧಿಯಲ್ಲಿ ವ್ಯಾಪಾರೀಕರಣವಾದ ಶಿವರಾತ್ರಿ ಜಾಗರಣೆ

ಎಸ್.ಎಸ್.ಭಟ್ ಈ ಬಾರಿ ೫೦ ಲಕ್ಷ ರೂ. ಅಂದಾಜು ವೆಚ್ಚದ ಯೋಜನೆ ಸಿದ್ಧವಾಗಿರುವುದಕ್ಕೆ ಭಕ್ತರ ಆಕ್ರೋಶ ನಂಜನಗೂಡು: ಶಿವರಾತ್ರಿಯ ಮುನ್ನಾ…

14 mins ago

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

9 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

9 hours ago