BREAKING NEWS

ಜಗತ್ತಿನ ಮೂರು-ನಾಲ್ಕು ಪ್ರಧಾನಿಗಳ ಸಾವಾಗುತ್ತದೆ : ಕೋಡಿಶ್ರೀ ಭವಿಷ್ಯ

ಧಾರವಾಡ : ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಭವಿಷ್ಯ ನುಡಿದಿದ್ದ ಕೋಡಿ ಶ್ರೀಗಳಾದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಮತ್ತೆ ಜಗತ್ತಿನಲ್ಲಿ ಮೂರು-ನಾಲ್ಕು ಪ್ರಧಾನಿಗಳು ಸಾಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿರುವ ಅವರು, ಭಾರತೀಯ ಪದ್ಧತಿಯಲ್ಲಿ ಸಂವತ್ಸರಗೀಗ ಮಹತ್ವ ಇದೆ. ಸಧ್ಯ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ ಸಂದರ್ಭದಲ್ಲಿ ಒಳತಿಗಿಂತ ಹೆಚ್ಚಾಗಿ ಕೆಡಕೆ ಹೆಚ್ಚು ಎಂದು ತಿಳಿಸಿದ್ದಾರೆ.

ಪಂಚಭೂತಗಳಿಂದ ತೊಂದರೆ ಎದುರಾಗಲಿದೆ. ಭೂ ಕುಸಿತ, ಜಲಪ್ರಳಯದ ಲಕ್ಷಣಗಳು ಇದೆ. ಅಲ್ಲದೇ ಗಾಳಿಯಿಂದಲೂ ತೊಂದರೆ, ಆಕಾಶ ತತ್ವ ಆಗಲಿದೆ. ಈಗಲೆ ಅಶುಭ ನುಡಿಯಬಾರದು . ಶುಭವೋ ಅಶುಭವೋ ಎಂದು ಶ್ರವಣದಲ್ಲಿ ಹೇಳುವೆ ಎಂದು ತಿಳಿಸಿದ್ದಾರೆ.

ರಾಜಕೀಯದ ಬಗ್ಗೆ ಮಾತನಾಡಿದ ಅವರು, ರಾಷ್ಟ್ರದಲ್ಲಿ ಅಧಿಕಾರದ ಉದ್ದೇಶದಿಂದ ಕೂಡಿದ್ದಾರೆ. ಇನ್ನೂ ಅಂಗಡಿ ಓಪನ್‌ ಆಗಿಲ್ಲ. ವ್ಯಾಪಾರ ಶುರುವಾಗಿಲ್ಲ. ಆ ಬಳಿಕ ರಾಷ್ಟ್ರ ರಾಜಕಾರಣದ ಭವಿಷ್ಯ ಹೇಳುವೆ ಎಂದರು.

ಜಗತ್ತಿನ್ಲ್ಲಿ ಎರಡು, ಮೂರು ಪ್ರಧಾನಿಗಳ ಸಾವು ಆಗಲಿದೆ. ದೊಡ್ಡ ದೊಡ್ಡವರಿಗೆ ನೋವು ತಾಪ ದುಃಖಾಗಲಿದೆ ಎಂದು ತಿಳಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಿರ್ಲೆ-ಭೇರ್ಯ-ಕೊಡಿಯಾಲ ರಸ್ತೆ ಅಭಿವೃದ್ಧಿ ಯಾವಾಗ?

ಭೇರ್ಯ ಮಹೇಶ್ ಪ್ರತಿನಿತ್ಯ ಈ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವವರಿಗೆ ಸಮಸ್ಯೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಕೆ.ಆರ್.ನಗರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ…

3 mins ago

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

23 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

24 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

24 hours ago