BREAKING NEWS

ಜೆಸಿಬಿ ಹರಿದು ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರು ಸಾವು

ರಾಯಚೂರು : ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರ ಮೇಲೆ‌ ಜೆಸಿಬಿ ಹರಿದು ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದಿರುವ ಈ ಘಟನೆಗೆ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ.

ಇದು ಮರಳುಗಣಿಗಾರಿಕೆಗೆ ಸಂಬಂಧಿಸಿದ ಜೆಸಿಬಿಯೆಂಬ ಆರೋಪ ಕೇಳಿ ಬಂದಿದ್ದು ಸಾರ್ವಜನಿಕರ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ದೇವದುರ್ಗ ಶಾಸಕಿ ಶಾಸಕಿ ಜಿ ಕರಮ್ಮೆ ನಾಯಕ ಅವರು ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಾಗಿ ಅಮಾಯಕರ ಜೀವ ಕಳೆದ ಹೋಗುತ್ತಿದ್ದು ಇದನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಮೃತಪಟ್ಟವರನ್ನು ಛತ್ತೀಸ್ ಗಢ ರಾಜ್ಯದ ಕಾರ್ಮಿಕರಾಗಿದ್ದು, ವಿಷ್ಣು (26), ಶಿವರಾಮ್(28), ಬಲರಾಮ್(30) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೋರ್ ವೆಲ್ ವಾಹನದಲ್ಲಿ ಬಂದಿದ್ದರು : ನೀಲವಂಜಿ ಗ್ರಾಮದಲ್ಲಿ ರೈತ ಓರ್ವನ ಜಮೀನಿಗೆ ಬೋರ್ವೆಲ್ ಕೊರೆಯಲು ಬೋರವೆಲ್ ವಾಹನದಲ್ಲಿ ಆಗಮಿಸಿದ್ದರು. ಬೋರವೆಲ್ ಕೆಲಸ ಮುಗಿದ ನಂತರದಲ್ಲಿ ರಾತ್ರಿಯ ವೇಳೆ ಹೊಲದಲ್ಲಿನ ಕಾಲುದಾರಿಯಲ್ಲಿ ಕಾರ್ಮಿಕರು ಮಲಗಿದ್ದು, ಬೋರ್ವೆವೆಲ್ ಕೊರೆಯುವ ಕೆಲಸ ಮಾಡಿದ್ದರಿಂದ ಗಾಢ ನಿದ್ರೆ ಜಾರಿಕೊಂಡಿದ್ದಾರೆ.

ಇತ್ತ ಹೊಲದಲ್ಲಿ ಜೆಸಿಬಿ ಹೊಲದಲ್ಲಿ ಬಂದಿದ್ದು, ರಾತ್ರಿ ಸಮಯದಲ್ಲಿ ನಿದ್ರೆಗೆ ಜಾರಿದ ಕಾರ್ಮಿಕರ ಮೇಲೆ ಹರಿದು ಹೋಗಿದೆ. ಪರಿಣಾಮ ಸ್ಥಳದಲ್ಲೇ ಮೃತಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಮೃತರ ಪೋಷಕರಿಗೆ ಮಾಹಿತಿ

ಘಟನೆ ವಿಷಯ ತಿಳಿದ ದೇವದುರ್ಗ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತದೆ. ಮೃತರ ಪೊಷಕರಿಗೆ ಮಾಹಿತಿ ನೀಡಲಾಗಿದೆ. ಅವರ ದೂರಿನ ಮೇರೆಗೆ ಮುಂದೆ ತನಿಖೆಯನ್ನು ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಶಾಸಕಿ ಜಿ ಕರೆಮ್ಮ ನಾಯಕ. ದೇವದುರ್ಗ ತಾಲೂಕಿನ ಅಕ್ರಮ ಮರಳುಗಾರಿಕೆಯಿಂದಾಗಿ ಇಂತಹ ಅಮಾಯಕರ ಜೀವ ಕಳೆದ ಹೋಗುತ್ತಿವೆ. ತಾಲೂಕಿನ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯುವುದಕ್ಕೆ ನಾನು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳು ಮನವಿ ಸಲ್ಲಿಸುವುದರ ಜೊತೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನಿನ್ನೆ ಮೂವರು ಮೃತಪಟ್ಟಿರುವ ಕಾರಣ ಅಕ್ರಮ ಮರಳುಗಾರಿಕೆ. ರಾತ್ರಿಯ ವೇಳೆ ದೊಡ್ಡ ದೊಡ್ಡ ಲಾರಿಗಳು ಓಡಾಡುತ್ತಿವೆ. ಇದನ್ನು ತಡೆಯುವಂತೆ ಸೂಚಿಸಿ, ಸ್ಥಳದಲ್ಲಿ ಪೋಲೀಸರನ್ನು ನಿಯೋಜಿಸುವಂತೆ ಹೇಳಿದ್ದೇನೆ. ಅಲ್ಲದೇ ದೊಡ್ಡ ದೊಡ್ಡ ಲಾರಿಗಳು ಓಡಾಡುತ್ತಿರುವುದ್ದರಿಂದ ಗ್ರಾಮಸ್ಥರು ಕೂಡ ಭಯ ಭೀತರಾಗಿ, ನಮ್ಮಗೆ ಕರೆ ಮಾಡುತ್ತಿದ್ದಾರೆ. ದೇವದುರ್ಗ ಒಂದು ಮಾಫಿಯ ಕೆಲಸ ಮಾಡುತ್ತಿದೆ‌ ಎಂದು ಮಾಹಿತಿ ನೀಡಿದ್ದಾರೆ.

lokesh

Recent Posts

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

1 hour ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

1 hour ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

1 hour ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

1 hour ago

ಖಮೇನಿ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ಅರಾಜಕತೆ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…

2 hours ago

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

2 hours ago