BREAKING NEWS

ಜೆಸಿಬಿ ಹರಿದು ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರು ಸಾವು

ರಾಯಚೂರು : ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರ ಮೇಲೆ‌ ಜೆಸಿಬಿ ಹರಿದು ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದಿರುವ ಈ ಘಟನೆಗೆ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ.

ಇದು ಮರಳುಗಣಿಗಾರಿಕೆಗೆ ಸಂಬಂಧಿಸಿದ ಜೆಸಿಬಿಯೆಂಬ ಆರೋಪ ಕೇಳಿ ಬಂದಿದ್ದು ಸಾರ್ವಜನಿಕರ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ದೇವದುರ್ಗ ಶಾಸಕಿ ಶಾಸಕಿ ಜಿ ಕರಮ್ಮೆ ನಾಯಕ ಅವರು ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಾಗಿ ಅಮಾಯಕರ ಜೀವ ಕಳೆದ ಹೋಗುತ್ತಿದ್ದು ಇದನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಮೃತಪಟ್ಟವರನ್ನು ಛತ್ತೀಸ್ ಗಢ ರಾಜ್ಯದ ಕಾರ್ಮಿಕರಾಗಿದ್ದು, ವಿಷ್ಣು (26), ಶಿವರಾಮ್(28), ಬಲರಾಮ್(30) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೋರ್ ವೆಲ್ ವಾಹನದಲ್ಲಿ ಬಂದಿದ್ದರು : ನೀಲವಂಜಿ ಗ್ರಾಮದಲ್ಲಿ ರೈತ ಓರ್ವನ ಜಮೀನಿಗೆ ಬೋರ್ವೆಲ್ ಕೊರೆಯಲು ಬೋರವೆಲ್ ವಾಹನದಲ್ಲಿ ಆಗಮಿಸಿದ್ದರು. ಬೋರವೆಲ್ ಕೆಲಸ ಮುಗಿದ ನಂತರದಲ್ಲಿ ರಾತ್ರಿಯ ವೇಳೆ ಹೊಲದಲ್ಲಿನ ಕಾಲುದಾರಿಯಲ್ಲಿ ಕಾರ್ಮಿಕರು ಮಲಗಿದ್ದು, ಬೋರ್ವೆವೆಲ್ ಕೊರೆಯುವ ಕೆಲಸ ಮಾಡಿದ್ದರಿಂದ ಗಾಢ ನಿದ್ರೆ ಜಾರಿಕೊಂಡಿದ್ದಾರೆ.

ಇತ್ತ ಹೊಲದಲ್ಲಿ ಜೆಸಿಬಿ ಹೊಲದಲ್ಲಿ ಬಂದಿದ್ದು, ರಾತ್ರಿ ಸಮಯದಲ್ಲಿ ನಿದ್ರೆಗೆ ಜಾರಿದ ಕಾರ್ಮಿಕರ ಮೇಲೆ ಹರಿದು ಹೋಗಿದೆ. ಪರಿಣಾಮ ಸ್ಥಳದಲ್ಲೇ ಮೃತಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಮೃತರ ಪೋಷಕರಿಗೆ ಮಾಹಿತಿ

ಘಟನೆ ವಿಷಯ ತಿಳಿದ ದೇವದುರ್ಗ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತದೆ. ಮೃತರ ಪೊಷಕರಿಗೆ ಮಾಹಿತಿ ನೀಡಲಾಗಿದೆ. ಅವರ ದೂರಿನ ಮೇರೆಗೆ ಮುಂದೆ ತನಿಖೆಯನ್ನು ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಶಾಸಕಿ ಜಿ ಕರೆಮ್ಮ ನಾಯಕ. ದೇವದುರ್ಗ ತಾಲೂಕಿನ ಅಕ್ರಮ ಮರಳುಗಾರಿಕೆಯಿಂದಾಗಿ ಇಂತಹ ಅಮಾಯಕರ ಜೀವ ಕಳೆದ ಹೋಗುತ್ತಿವೆ. ತಾಲೂಕಿನ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯುವುದಕ್ಕೆ ನಾನು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳು ಮನವಿ ಸಲ್ಲಿಸುವುದರ ಜೊತೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನಿನ್ನೆ ಮೂವರು ಮೃತಪಟ್ಟಿರುವ ಕಾರಣ ಅಕ್ರಮ ಮರಳುಗಾರಿಕೆ. ರಾತ್ರಿಯ ವೇಳೆ ದೊಡ್ಡ ದೊಡ್ಡ ಲಾರಿಗಳು ಓಡಾಡುತ್ತಿವೆ. ಇದನ್ನು ತಡೆಯುವಂತೆ ಸೂಚಿಸಿ, ಸ್ಥಳದಲ್ಲಿ ಪೋಲೀಸರನ್ನು ನಿಯೋಜಿಸುವಂತೆ ಹೇಳಿದ್ದೇನೆ. ಅಲ್ಲದೇ ದೊಡ್ಡ ದೊಡ್ಡ ಲಾರಿಗಳು ಓಡಾಡುತ್ತಿರುವುದ್ದರಿಂದ ಗ್ರಾಮಸ್ಥರು ಕೂಡ ಭಯ ಭೀತರಾಗಿ, ನಮ್ಮಗೆ ಕರೆ ಮಾಡುತ್ತಿದ್ದಾರೆ. ದೇವದುರ್ಗ ಒಂದು ಮಾಫಿಯ ಕೆಲಸ ಮಾಡುತ್ತಿದೆ‌ ಎಂದು ಮಾಹಿತಿ ನೀಡಿದ್ದಾರೆ.

lokesh

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

44 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

49 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

4 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

4 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago