BREAKING NEWS

ಜೆಸಿಬಿ ಹರಿದು ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರು ಸಾವು

ರಾಯಚೂರು : ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರ ಮೇಲೆ‌ ಜೆಸಿಬಿ ಹರಿದು ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದಿರುವ ಈ ಘಟನೆಗೆ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ.

ಇದು ಮರಳುಗಣಿಗಾರಿಕೆಗೆ ಸಂಬಂಧಿಸಿದ ಜೆಸಿಬಿಯೆಂಬ ಆರೋಪ ಕೇಳಿ ಬಂದಿದ್ದು ಸಾರ್ವಜನಿಕರ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ದೇವದುರ್ಗ ಶಾಸಕಿ ಶಾಸಕಿ ಜಿ ಕರಮ್ಮೆ ನಾಯಕ ಅವರು ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಾಗಿ ಅಮಾಯಕರ ಜೀವ ಕಳೆದ ಹೋಗುತ್ತಿದ್ದು ಇದನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಮೃತಪಟ್ಟವರನ್ನು ಛತ್ತೀಸ್ ಗಢ ರಾಜ್ಯದ ಕಾರ್ಮಿಕರಾಗಿದ್ದು, ವಿಷ್ಣು (26), ಶಿವರಾಮ್(28), ಬಲರಾಮ್(30) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೋರ್ ವೆಲ್ ವಾಹನದಲ್ಲಿ ಬಂದಿದ್ದರು : ನೀಲವಂಜಿ ಗ್ರಾಮದಲ್ಲಿ ರೈತ ಓರ್ವನ ಜಮೀನಿಗೆ ಬೋರ್ವೆಲ್ ಕೊರೆಯಲು ಬೋರವೆಲ್ ವಾಹನದಲ್ಲಿ ಆಗಮಿಸಿದ್ದರು. ಬೋರವೆಲ್ ಕೆಲಸ ಮುಗಿದ ನಂತರದಲ್ಲಿ ರಾತ್ರಿಯ ವೇಳೆ ಹೊಲದಲ್ಲಿನ ಕಾಲುದಾರಿಯಲ್ಲಿ ಕಾರ್ಮಿಕರು ಮಲಗಿದ್ದು, ಬೋರ್ವೆವೆಲ್ ಕೊರೆಯುವ ಕೆಲಸ ಮಾಡಿದ್ದರಿಂದ ಗಾಢ ನಿದ್ರೆ ಜಾರಿಕೊಂಡಿದ್ದಾರೆ.

ಇತ್ತ ಹೊಲದಲ್ಲಿ ಜೆಸಿಬಿ ಹೊಲದಲ್ಲಿ ಬಂದಿದ್ದು, ರಾತ್ರಿ ಸಮಯದಲ್ಲಿ ನಿದ್ರೆಗೆ ಜಾರಿದ ಕಾರ್ಮಿಕರ ಮೇಲೆ ಹರಿದು ಹೋಗಿದೆ. ಪರಿಣಾಮ ಸ್ಥಳದಲ್ಲೇ ಮೃತಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಮೃತರ ಪೋಷಕರಿಗೆ ಮಾಹಿತಿ

ಘಟನೆ ವಿಷಯ ತಿಳಿದ ದೇವದುರ್ಗ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತದೆ. ಮೃತರ ಪೊಷಕರಿಗೆ ಮಾಹಿತಿ ನೀಡಲಾಗಿದೆ. ಅವರ ದೂರಿನ ಮೇರೆಗೆ ಮುಂದೆ ತನಿಖೆಯನ್ನು ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಶಾಸಕಿ ಜಿ ಕರೆಮ್ಮ ನಾಯಕ. ದೇವದುರ್ಗ ತಾಲೂಕಿನ ಅಕ್ರಮ ಮರಳುಗಾರಿಕೆಯಿಂದಾಗಿ ಇಂತಹ ಅಮಾಯಕರ ಜೀವ ಕಳೆದ ಹೋಗುತ್ತಿವೆ. ತಾಲೂಕಿನ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯುವುದಕ್ಕೆ ನಾನು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳು ಮನವಿ ಸಲ್ಲಿಸುವುದರ ಜೊತೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನಿನ್ನೆ ಮೂವರು ಮೃತಪಟ್ಟಿರುವ ಕಾರಣ ಅಕ್ರಮ ಮರಳುಗಾರಿಕೆ. ರಾತ್ರಿಯ ವೇಳೆ ದೊಡ್ಡ ದೊಡ್ಡ ಲಾರಿಗಳು ಓಡಾಡುತ್ತಿವೆ. ಇದನ್ನು ತಡೆಯುವಂತೆ ಸೂಚಿಸಿ, ಸ್ಥಳದಲ್ಲಿ ಪೋಲೀಸರನ್ನು ನಿಯೋಜಿಸುವಂತೆ ಹೇಳಿದ್ದೇನೆ. ಅಲ್ಲದೇ ದೊಡ್ಡ ದೊಡ್ಡ ಲಾರಿಗಳು ಓಡಾಡುತ್ತಿರುವುದ್ದರಿಂದ ಗ್ರಾಮಸ್ಥರು ಕೂಡ ಭಯ ಭೀತರಾಗಿ, ನಮ್ಮಗೆ ಕರೆ ಮಾಡುತ್ತಿದ್ದಾರೆ. ದೇವದುರ್ಗ ಒಂದು ಮಾಫಿಯ ಕೆಲಸ ಮಾಡುತ್ತಿದೆ‌ ಎಂದು ಮಾಹಿತಿ ನೀಡಿದ್ದಾರೆ.

lokesh

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

6 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

11 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago