BREAKING NEWS

ಜೆಸಿಬಿ ಹರಿದು ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರು ಸಾವು

ರಾಯಚೂರು : ಹೊಲದ ಕಾಲುದಾರಿಯಲ್ಲಿ ಮಲಗಿದ್ದ ಮೂವರು ಕಾರ್ಮಿಕರ ಮೇಲೆ‌ ಜೆಸಿಬಿ ಹರಿದು ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದಿರುವ ಈ ಘಟನೆಗೆ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ.

ಇದು ಮರಳುಗಣಿಗಾರಿಕೆಗೆ ಸಂಬಂಧಿಸಿದ ಜೆಸಿಬಿಯೆಂಬ ಆರೋಪ ಕೇಳಿ ಬಂದಿದ್ದು ಸಾರ್ವಜನಿಕರ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ದೇವದುರ್ಗ ಶಾಸಕಿ ಶಾಸಕಿ ಜಿ ಕರಮ್ಮೆ ನಾಯಕ ಅವರು ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಾಗಿ ಅಮಾಯಕರ ಜೀವ ಕಳೆದ ಹೋಗುತ್ತಿದ್ದು ಇದನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಮೃತಪಟ್ಟವರನ್ನು ಛತ್ತೀಸ್ ಗಢ ರಾಜ್ಯದ ಕಾರ್ಮಿಕರಾಗಿದ್ದು, ವಿಷ್ಣು (26), ಶಿವರಾಮ್(28), ಬಲರಾಮ್(30) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೋರ್ ವೆಲ್ ವಾಹನದಲ್ಲಿ ಬಂದಿದ್ದರು : ನೀಲವಂಜಿ ಗ್ರಾಮದಲ್ಲಿ ರೈತ ಓರ್ವನ ಜಮೀನಿಗೆ ಬೋರ್ವೆಲ್ ಕೊರೆಯಲು ಬೋರವೆಲ್ ವಾಹನದಲ್ಲಿ ಆಗಮಿಸಿದ್ದರು. ಬೋರವೆಲ್ ಕೆಲಸ ಮುಗಿದ ನಂತರದಲ್ಲಿ ರಾತ್ರಿಯ ವೇಳೆ ಹೊಲದಲ್ಲಿನ ಕಾಲುದಾರಿಯಲ್ಲಿ ಕಾರ್ಮಿಕರು ಮಲಗಿದ್ದು, ಬೋರ್ವೆವೆಲ್ ಕೊರೆಯುವ ಕೆಲಸ ಮಾಡಿದ್ದರಿಂದ ಗಾಢ ನಿದ್ರೆ ಜಾರಿಕೊಂಡಿದ್ದಾರೆ.

ಇತ್ತ ಹೊಲದಲ್ಲಿ ಜೆಸಿಬಿ ಹೊಲದಲ್ಲಿ ಬಂದಿದ್ದು, ರಾತ್ರಿ ಸಮಯದಲ್ಲಿ ನಿದ್ರೆಗೆ ಜಾರಿದ ಕಾರ್ಮಿಕರ ಮೇಲೆ ಹರಿದು ಹೋಗಿದೆ. ಪರಿಣಾಮ ಸ್ಥಳದಲ್ಲೇ ಮೃತಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಮೃತರ ಪೋಷಕರಿಗೆ ಮಾಹಿತಿ

ಘಟನೆ ವಿಷಯ ತಿಳಿದ ದೇವದುರ್ಗ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತದೆ. ಮೃತರ ಪೊಷಕರಿಗೆ ಮಾಹಿತಿ ನೀಡಲಾಗಿದೆ. ಅವರ ದೂರಿನ ಮೇರೆಗೆ ಮುಂದೆ ತನಿಖೆಯನ್ನು ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಶಾಸಕಿ ಜಿ ಕರೆಮ್ಮ ನಾಯಕ. ದೇವದುರ್ಗ ತಾಲೂಕಿನ ಅಕ್ರಮ ಮರಳುಗಾರಿಕೆಯಿಂದಾಗಿ ಇಂತಹ ಅಮಾಯಕರ ಜೀವ ಕಳೆದ ಹೋಗುತ್ತಿವೆ. ತಾಲೂಕಿನ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯುವುದಕ್ಕೆ ನಾನು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳು ಮನವಿ ಸಲ್ಲಿಸುವುದರ ಜೊತೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನಿನ್ನೆ ಮೂವರು ಮೃತಪಟ್ಟಿರುವ ಕಾರಣ ಅಕ್ರಮ ಮರಳುಗಾರಿಕೆ. ರಾತ್ರಿಯ ವೇಳೆ ದೊಡ್ಡ ದೊಡ್ಡ ಲಾರಿಗಳು ಓಡಾಡುತ್ತಿವೆ. ಇದನ್ನು ತಡೆಯುವಂತೆ ಸೂಚಿಸಿ, ಸ್ಥಳದಲ್ಲಿ ಪೋಲೀಸರನ್ನು ನಿಯೋಜಿಸುವಂತೆ ಹೇಳಿದ್ದೇನೆ. ಅಲ್ಲದೇ ದೊಡ್ಡ ದೊಡ್ಡ ಲಾರಿಗಳು ಓಡಾಡುತ್ತಿರುವುದ್ದರಿಂದ ಗ್ರಾಮಸ್ಥರು ಕೂಡ ಭಯ ಭೀತರಾಗಿ, ನಮ್ಮಗೆ ಕರೆ ಮಾಡುತ್ತಿದ್ದಾರೆ. ದೇವದುರ್ಗ ಒಂದು ಮಾಫಿಯ ಕೆಲಸ ಮಾಡುತ್ತಿದೆ‌ ಎಂದು ಮಾಹಿತಿ ನೀಡಿದ್ದಾರೆ.

lokesh

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

7 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

7 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago