BREAKING NEWS

ಬೈಯಪ್ಪನಹಳ್ಳಿಯಿಂದ ಹೋಗಬೇಕಿದ್ದ ಮೂರು ರೈಲುಗಳು ರದ್ದು : ಕಳಸದ 110 ಜನರು ಸೇಫ್

ಬೆಂಗಳೂರು : ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ತೆರಳುತ್ತಿದ್ದ ರೈಲು ಅಪಘಾತಕ್ಕೊಳಗಾಗಿದ್ದು, 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಇತ್ತ ಬೆಂಗಳೂರಿನಿಂದ ಓಡಿಶಾಗೆ ಹೊರಡಬೇಕಿದ್ದ ಮೂರು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಮುಂಗಡ ಟಿಕೆಟ್ ಕಾಯ್ದಿರಿಸಿದ್ದ ಪ್ರಯಾಣಿಕರಿಗೆ ಹಣ ಹಿಂದಿರುಗಿಸಲಾಗುತ್ತಿದೆ. ಇಂದು ಬೆಂಗಳೂರಿನ ಬೈಯಪ್ಪನಹಳ್ಳಿ SMVT ರೈಲ್ವೆ ನಿಲ್ದಾಣದಿಂದ ತೆರಳಬೇಕಿದ್ದ ಮೂರು ರೈಲುಗಳ ಸಂಚಾರವನ್ನು (ರದ್ದುಗೊಂಡ ರೈಲುಗಳ ಸಂಖ್ಯೆ- 12551, 12864 ಮತ್ತು 12253) ರದ್ದುಗೊಳಿಸಲಾಗಿದೆ.

ಅಪಘಾತಕ್ಕೊಳಗಾದ ರೈಲಿನಲ್ಲಿ ಬೈಯ್ಯಪ್ಪನಹಳ್ಳಿ SMVTನಿಂದ 1,294 ಮಂದಿ ಪ್ರಯಾಣ ಮಾಡುತ್ತಿದ್ದರು. ಇದರಲ್ಲಿ 994 ಮಂದಿ ರಿಸರ್ವ್ಡ್ ಪ್ಯಾಸೆಂಜರ್​, 300 ಅನ್ ರಿಸರ್ವ್ಡ್ ಪ್ಯಾಸೆಂಜರ್ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕಳಸದ 110 ಜನ ಸೇಫ್

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ 110 ಮಂದಿ ಇದೇ ರೈಲಿನಲ್ಲಿ ಜಾರ್ಖಂಡ್​ನ ಸಮ್ಮೇದ ಶಿಖರ್ಜಿಗೆ ಪ್ರಯಾಣ ಬೆಳೆಸಿದ್ದರು. ಎಲ್ಲರೂ ಅಪಘಾತಕ್ಕೀಡಾದ ಬೋಗಿಗಳ ಪಕ್ಕದ ಬೋಗಿಯಲ್ಲಿ ಕುಳಿತಿದ್ದರು ಎಂದು ತಿಳಿದು ಬಂದಿದೆ. 150 ಜನರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳಸ, ಸಂಸೆ, ಹೊರನಾಡು ಸುತ್ತಮುತ್ತಲಿನ ಜೈನ ಸಮುದಾಯದ 110 ಮಂದಿ ಪ್ರಯಾಣಿಸುತ್ತಿದ್ದರು.

ರೈಲು ಅಪಘಾತದ ಸಹಾಯಕ್ಕಾಗಿ ಸಹಾಯವಾಣಿ

ಬೆಂಗಳೂರು: 080-22356409
ಬಂಗಾರಪೇಟೆ: 08153 255253
ಕುಪ್ಪಂ: 8431403419
ವಿಶ್ವೇಶ್ವರಯ್ಯ ಟರ್ಮಿನಲ್ : 09606005129
ಕೃಷ್ಣರಾಜಪುರಂ: 88612 03980

 

lokesh

Recent Posts

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

7 mins ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

22 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

2 hours ago

ಮಹದೇಶ್ವರ ಬೆಟ್ಟ| ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…

2 hours ago

ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಾಕದಂತೆ ಎಚ್ಚರಿಕೆ: ಶಬರಿಮಲೆಗೆ ಹೊರಟಿದ್ದ ವಾಹನ ತಡೆದು ದಬ್ಬಾಳಿಕೆ

ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…

2 hours ago

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್‌…

2 hours ago