BREAKING NEWS

ನಕಲಿ ನೋಂದಣಿ ಮಾಡಿದ ಅಧಿಕಾರಿಗೆ ಮೂರು ವರ್ಷ ಜೈಲು: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಥವಾ ಕಾನೂನಿನಡಿಯಲ್ಲಿ ನಿಷೇಧಿಸಲಾದ ಇತರ ದಾಖಲೆಗಳ ಆಧಾರದ ಮೇಲೆ ಆಸ್ತಿ ವಹಿವಾಟುಗಳನ್ನು ಅಧಿಕೃತಗೊಳಿಸುವ ಅಧಿಕಾರಿಗಳಿಗೆ ಶಿಕ್ಷೆ ವಿಧಿಸುವ ಮತ್ತು ಅಂತಹ ನಕಲಿ ನೋಂದಣಿಯನ್ನು ರದ್ದುಗೊಳಿಸುವ ನೋಂದಣಿ ವಿಧೇಯಕವನ್ನು ಸಚಿವ ಕೃಷ್ಣಭೈರೇಗೌಡ ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಮಸೂದೆಯು ಸರ್ವಾನುಮತದಿಂದ ಅಂಗೀಕಾರಗೊಂಡಿದೆ.

ಸದನದಲ್ಲಿ ಮಸೂದೆಯನ್ನು ಮಂಡಿಸಿ, ಈ ಮಸೂದೆ ಏಕೆ ಅವಶ್ಯಕ? ಎಂದು ತಿಳಿಸಿರುವ ಸಚಿವರು, “ನೋಂದಣಿ ಕಾಯ್ದೆ 1908ರಲ್ಲಿ ಜಾರಿಯಾಗಿದೆ. ಈ ಕಾಯ್ದೆಯಲ್ಲಿ ಯಾವುದೇ ಮಾಲೀಕತ್ವ ಇಲ್ಲದ, ದಾಖಲೆ ಇಲ್ಲದ ಅಥವಾ ನಿಜವಾದ ಮಾಲೀಕರಂತೆ ನಟಿಸುವ ಮೂಲಕ ಮಾಡಿದ ಮೋಸದ ನೋಂದಣಿಯನ್ನು ರದ್ದುಪಡಿಸಲು ನೋಂದಣಿ ಪ್ರಾಧಿಕಾರಕ್ಕೆ ಅಧಿಕಾರ ಇರುವುದಿಲ್ಲ.

ನೊಂದ ಮಾಲೀಕರು ಸಿವಿಲ್ ನ್ಯಾಯಾಲಯದ ಮೂಲಕ ಮೋಸದ ನೋಂದಣಿಯನ್ನು ರದ್ದು ಮಾಡಬೇಕಿರುತ್ತದೆ. ಆದರೆ, ನ್ಯಾಯಾಂಗ ಆದೇಶ ಪಡೆಯುವ ಪ್ರಕ್ರಿಯೆ ಕನಿಷ್ಟ 10 ವರ್ಷಕ್ಕೂ ಹೆಚ್ಚಿರುತ್ತದೆ. ಇದರಿಂದಾಗಿ ಆಸ್ತಿ ಮಾಲೀಕರಿಗೆ ಕಿರುಕುಳ, ತೊಂದರೆ ಅನ್ಯಾಯವಾಗುತ್ತದೆ. ಸಾರ್ವಜನಿಕರಿಗೆ ಉಂಟಾಗುವ ಇಂತಹ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ” ಎಂದು ಮಸೂದೆಯನ್ನು ಸಮರ್ಥಿಸಿಕೊಂಡರು.

ಅಲ್ಲದೆ, ನಕಲಿ ದಾಲೆಗಳ ಮೂಲಕ ಮೋಸ ಮಾಡುವವರಿಗೆ ಸಹಾಯವಾಗುತ್ತಿತ್ತು. ಕೆಲವು ಅಧಿಕಾರಿಗಳು ತಮಗೇ ಗೊತ್ತಿಲ್ಲದೆ ನಕಲಿ ನೋಂದಣಿ ಮಾಡಿರುತ್ತಾರೆ. ಇನ್ನೂ ಕೆಲವು ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ನಕಲೀದಾರರ ಜೊತೆ ಶಾಮೀಲಾಗಿ ತಪ್ಪು ನೋಂದಣಿ ಮಾಡಿದ್ದಾರೆ. ಇಂತಹ ಹಲವು ಪ್ರಕರಣಗಳ ದೊಡ್ಡ ಪಟ್ಟಿಯೇ ನನ್ನ ಬಳಿ ಇದೆ. ಪ್ರಸ್ತುತ ಶಾಸಕರಾಗಿರುವ ನರೇಂದ್ರ ಸ್ವಾಮಿ, ಅಭಯ್ ಪಾಟೀಲ್ ಅವರ ಆಸ್ತಿಯನ್ನೇ ಹೀಗೆ ನಕಲು ದಾಖಲೆಯ ಮೇಲೆ ಕಬಳಿಸಲಾಗಿತ್ತು. ಮಾಜಿ ಶಾಸಕರಾದ ಗೂಳಿಹಟ್ಟಿ ಶೇಖರ್ ಹಾಗೂ ಬಿ ಶಂಕರಾನಂದ್ ಸಹ ಇಂತಹ ಪರಿಸ್ಥಿತಿಯನ್ನು ಎದುರಿಸಿದ್ದರು. ಶಾಸಕರಿಗೇ ಈ ಪರಿಸ್ಥಿತಿಯಾದರೆ, ಸಾಮಾನ್ಯರ ಪರಿಸ್ಥಿತಿ ಏನು?

ಹೀಗಾಗಿ ಆಡಳಿತ ಸುಧಾರಣೆ, ಆಡಳಿತ ಸರಳೀಕರಣ ಮತ್ತು ಕಚೇರಿಗಳಲ್ಲಿ ವಿಳಂಬ, ಶೋಷಣೆ, ಸುಲಿಗೆ ಇಲ್ಲದೆ ಜನರ ಕೆಲಸ ತತಕ್ಷಣ ಆಗಬೇಕು ಎಂಬ ಕಾರಣದಿಂದ ಇಂದು ನೋಂದಣಿ ತಿದ್ದುಪಡಿ ವಿಧೇಯಕವನ್ನು ಜಾರಿಗೆ ತರಲಾಗಿದೆ ತರಲಾಗುತ್ತಿದೆ” ಎಂದು ಸಚಿವ ಕೃಷ್ಣಭೈರೇಗೌಡ ಸದನಕ್ಕೆ ತಿಳಿಸಿದರು.

ನೋಂದಣಿ ತಿದ್ದುಪಡಿ ಮಸೂದೆ 2023:

ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆಯ ಪ್ರಕಾರ, ನೋಂದಣಿ ಅಧಿಕಾರಿ (ಸಾಮಾನ್ಯವಾಗಿ ಸಬ್-ರಿಜಿಸ್ಟ್ರಾರ್) ನಕಲಿ ದಾಖಲೆಗಳನ್ನು ನೋಂದಾಯಿಸಲು ನಿರಾಕರಿಸಬೇಕು. ಯಾವುದೇ ಸ್ಥಿರ ಆಸ್ತಿಗಳಿಗೆ ಸಂಬಂಧಿಸಿದ ದಾಲೆಗಳು ಕೇಂದ್ರ ಅಥವಾ ರಾಜ್ಯ ಕಾಯ್ದೆಗಳಿಂದ ನಿಷೇಧಿಸಲಾಗಿದ್ದು, ಅಂತಹ ಆಸ್ತಿಗಳ ದಾಖಲೆಗಳನ್ನು ನೋಂದಾಯಿಸಲು ಅಧಿಕಾರಿಗಳು ನಿರಾಕರಿಸಬೇಕು.

ಅಧಿಕಾರಿಗಳು ನಿಯಮ ಮೀರಿ ನಕಲಿ ದಾಖಲಾತಿಗಳನ್ನು ನೋಂದಾಯಿಸಿದರೆ, ಈ ಮಸೂದೆಯು ಅಧಿಕಾರಿಗಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲು ಪ್ರಸ್ತಾಪಿಸುತ್ತದೆ. ದಾಖಲೆಗಳ ಮೋಸದ ನೋಂದಣಿಯಲ್ಲಿ ತೊಡಗಿರುವ ಕಂಪನಿಗಳನ್ನು ಶಿಕ್ಷಿಸಲು ಮಸೂದೆ ಪ್ರಸ್ತಾಪಿಸುತ್ತದೆ.

andolanait

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

7 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

7 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

8 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

8 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

8 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

9 hours ago