BREAKING NEWS

ನಕಲಿ ನೋಂದಣಿ ಮಾಡಿದ ಅಧಿಕಾರಿಗೆ ಮೂರು ವರ್ಷ ಜೈಲು: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಥವಾ ಕಾನೂನಿನಡಿಯಲ್ಲಿ ನಿಷೇಧಿಸಲಾದ ಇತರ ದಾಖಲೆಗಳ ಆಧಾರದ ಮೇಲೆ ಆಸ್ತಿ ವಹಿವಾಟುಗಳನ್ನು ಅಧಿಕೃತಗೊಳಿಸುವ ಅಧಿಕಾರಿಗಳಿಗೆ ಶಿಕ್ಷೆ ವಿಧಿಸುವ ಮತ್ತು ಅಂತಹ ನಕಲಿ ನೋಂದಣಿಯನ್ನು ರದ್ದುಗೊಳಿಸುವ ನೋಂದಣಿ ವಿಧೇಯಕವನ್ನು ಸಚಿವ ಕೃಷ್ಣಭೈರೇಗೌಡ ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಮಸೂದೆಯು ಸರ್ವಾನುಮತದಿಂದ ಅಂಗೀಕಾರಗೊಂಡಿದೆ.

ಸದನದಲ್ಲಿ ಮಸೂದೆಯನ್ನು ಮಂಡಿಸಿ, ಈ ಮಸೂದೆ ಏಕೆ ಅವಶ್ಯಕ? ಎಂದು ತಿಳಿಸಿರುವ ಸಚಿವರು, “ನೋಂದಣಿ ಕಾಯ್ದೆ 1908ರಲ್ಲಿ ಜಾರಿಯಾಗಿದೆ. ಈ ಕಾಯ್ದೆಯಲ್ಲಿ ಯಾವುದೇ ಮಾಲೀಕತ್ವ ಇಲ್ಲದ, ದಾಖಲೆ ಇಲ್ಲದ ಅಥವಾ ನಿಜವಾದ ಮಾಲೀಕರಂತೆ ನಟಿಸುವ ಮೂಲಕ ಮಾಡಿದ ಮೋಸದ ನೋಂದಣಿಯನ್ನು ರದ್ದುಪಡಿಸಲು ನೋಂದಣಿ ಪ್ರಾಧಿಕಾರಕ್ಕೆ ಅಧಿಕಾರ ಇರುವುದಿಲ್ಲ.

ನೊಂದ ಮಾಲೀಕರು ಸಿವಿಲ್ ನ್ಯಾಯಾಲಯದ ಮೂಲಕ ಮೋಸದ ನೋಂದಣಿಯನ್ನು ರದ್ದು ಮಾಡಬೇಕಿರುತ್ತದೆ. ಆದರೆ, ನ್ಯಾಯಾಂಗ ಆದೇಶ ಪಡೆಯುವ ಪ್ರಕ್ರಿಯೆ ಕನಿಷ್ಟ 10 ವರ್ಷಕ್ಕೂ ಹೆಚ್ಚಿರುತ್ತದೆ. ಇದರಿಂದಾಗಿ ಆಸ್ತಿ ಮಾಲೀಕರಿಗೆ ಕಿರುಕುಳ, ತೊಂದರೆ ಅನ್ಯಾಯವಾಗುತ್ತದೆ. ಸಾರ್ವಜನಿಕರಿಗೆ ಉಂಟಾಗುವ ಇಂತಹ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ” ಎಂದು ಮಸೂದೆಯನ್ನು ಸಮರ್ಥಿಸಿಕೊಂಡರು.

ಅಲ್ಲದೆ, ನಕಲಿ ದಾಲೆಗಳ ಮೂಲಕ ಮೋಸ ಮಾಡುವವರಿಗೆ ಸಹಾಯವಾಗುತ್ತಿತ್ತು. ಕೆಲವು ಅಧಿಕಾರಿಗಳು ತಮಗೇ ಗೊತ್ತಿಲ್ಲದೆ ನಕಲಿ ನೋಂದಣಿ ಮಾಡಿರುತ್ತಾರೆ. ಇನ್ನೂ ಕೆಲವು ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ನಕಲೀದಾರರ ಜೊತೆ ಶಾಮೀಲಾಗಿ ತಪ್ಪು ನೋಂದಣಿ ಮಾಡಿದ್ದಾರೆ. ಇಂತಹ ಹಲವು ಪ್ರಕರಣಗಳ ದೊಡ್ಡ ಪಟ್ಟಿಯೇ ನನ್ನ ಬಳಿ ಇದೆ. ಪ್ರಸ್ತುತ ಶಾಸಕರಾಗಿರುವ ನರೇಂದ್ರ ಸ್ವಾಮಿ, ಅಭಯ್ ಪಾಟೀಲ್ ಅವರ ಆಸ್ತಿಯನ್ನೇ ಹೀಗೆ ನಕಲು ದಾಖಲೆಯ ಮೇಲೆ ಕಬಳಿಸಲಾಗಿತ್ತು. ಮಾಜಿ ಶಾಸಕರಾದ ಗೂಳಿಹಟ್ಟಿ ಶೇಖರ್ ಹಾಗೂ ಬಿ ಶಂಕರಾನಂದ್ ಸಹ ಇಂತಹ ಪರಿಸ್ಥಿತಿಯನ್ನು ಎದುರಿಸಿದ್ದರು. ಶಾಸಕರಿಗೇ ಈ ಪರಿಸ್ಥಿತಿಯಾದರೆ, ಸಾಮಾನ್ಯರ ಪರಿಸ್ಥಿತಿ ಏನು?

ಹೀಗಾಗಿ ಆಡಳಿತ ಸುಧಾರಣೆ, ಆಡಳಿತ ಸರಳೀಕರಣ ಮತ್ತು ಕಚೇರಿಗಳಲ್ಲಿ ವಿಳಂಬ, ಶೋಷಣೆ, ಸುಲಿಗೆ ಇಲ್ಲದೆ ಜನರ ಕೆಲಸ ತತಕ್ಷಣ ಆಗಬೇಕು ಎಂಬ ಕಾರಣದಿಂದ ಇಂದು ನೋಂದಣಿ ತಿದ್ದುಪಡಿ ವಿಧೇಯಕವನ್ನು ಜಾರಿಗೆ ತರಲಾಗಿದೆ ತರಲಾಗುತ್ತಿದೆ” ಎಂದು ಸಚಿವ ಕೃಷ್ಣಭೈರೇಗೌಡ ಸದನಕ್ಕೆ ತಿಳಿಸಿದರು.

ನೋಂದಣಿ ತಿದ್ದುಪಡಿ ಮಸೂದೆ 2023:

ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆಯ ಪ್ರಕಾರ, ನೋಂದಣಿ ಅಧಿಕಾರಿ (ಸಾಮಾನ್ಯವಾಗಿ ಸಬ್-ರಿಜಿಸ್ಟ್ರಾರ್) ನಕಲಿ ದಾಖಲೆಗಳನ್ನು ನೋಂದಾಯಿಸಲು ನಿರಾಕರಿಸಬೇಕು. ಯಾವುದೇ ಸ್ಥಿರ ಆಸ್ತಿಗಳಿಗೆ ಸಂಬಂಧಿಸಿದ ದಾಲೆಗಳು ಕೇಂದ್ರ ಅಥವಾ ರಾಜ್ಯ ಕಾಯ್ದೆಗಳಿಂದ ನಿಷೇಧಿಸಲಾಗಿದ್ದು, ಅಂತಹ ಆಸ್ತಿಗಳ ದಾಖಲೆಗಳನ್ನು ನೋಂದಾಯಿಸಲು ಅಧಿಕಾರಿಗಳು ನಿರಾಕರಿಸಬೇಕು.

ಅಧಿಕಾರಿಗಳು ನಿಯಮ ಮೀರಿ ನಕಲಿ ದಾಖಲಾತಿಗಳನ್ನು ನೋಂದಾಯಿಸಿದರೆ, ಈ ಮಸೂದೆಯು ಅಧಿಕಾರಿಗಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲು ಪ್ರಸ್ತಾಪಿಸುತ್ತದೆ. ದಾಖಲೆಗಳ ಮೋಸದ ನೋಂದಣಿಯಲ್ಲಿ ತೊಡಗಿರುವ ಕಂಪನಿಗಳನ್ನು ಶಿಕ್ಷಿಸಲು ಮಸೂದೆ ಪ್ರಸ್ತಾಪಿಸುತ್ತದೆ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

5 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago