ದೇವನಹಳ್ಳಿ : ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ದೇವನಹಳ್ಳಿ ಪರಿಶಿಷ್ಟ ಮೀಸಲು ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್ ಘೋಷಿಸಿರುವುದರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಹಾಗೂ ಟಿಕೆಟ್ ಆಕಾಂಕ್ಷಿಗಳು ಪಟ್ಟಣದ ಖಾದಿ ಬೋರ್ಡ್ ಕಚೇರಿಯಲ್ಲಿ ಶುಕ್ರವಾರ ಗೋಪ್ಯ ಸಭೆ ನಡೆಸಿದರು.
ಐದು ವರ್ಷಗಳಿಂದ ಕ್ಷೇತ್ರದಲ್ಲಿ ಎಲ್ಲ ಆಕಾಂಕ್ಷಿಗಳು ಸಾಕಷ್ಟು ಜನಪರ ಕೆಲಸ ಮಾಡಿಕೊಂಡು, ಪಕ್ಷ ಸಂಘಟನೆ ಮಾಡಿತ್ತಿದ್ದಾರೆ. ಕಾಂಗ್ರೆಸ್ ಪರ ಜನಾಭಿಪ್ರಾಯ ರೂಪಿಸಲು ಶ್ರಮಿಸಿದ್ದೇವೆ. ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಏಕಿ ಕೆ.ಎಚ್.ಮುನಿಯಪ್ಪರಿಗೆ ಟಿಕೆಟ್ ಘೋಷಿಸಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.
ಸಭೆಯಲ್ಲಿ ಜಮಾವಣೆಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೆ.ಎಚ್.ಮುನಿಯಪ್ಪ ಅವರಿಗೆ ಬೆಂಬಲ ನೀಡುವ ಬದಲು, ಸ್ಥಳೀಯ ಆಕಾಂಕ್ಷಿ ಒಬ್ಬರಿಗೆ ಅವಕಾಶ ಮಾಡಿಕೊಡಬೇಕು. ದೇವನಹಳ್ಳಿ ಹೊರತಾಗಿ ಬೇರೆಡೆ ಕೆ.ಎಚ್.ಮುನಿಯಪ್ಪ ಸ್ಪರ್ಧೆ ಮಾಡಲಿ ಎಂಬ ಚರ್ಚೆಯನ್ನು ತಾಸುಗಟ್ಟಲೇ ನಡೆಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ‘ನನ್ನನ್ನು ಸೇರಿದಂತೆ ಪಕ್ಷದಲ್ಲಿ ಸಾಕಷ್ಟು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಸತತ 3-4 ವರ್ಷ ಪಕ್ಷವನ್ನು ಬಲಿಷ್ಠಗೊಳ್ಳಿಸಲು ಸಾಕಷ್ಟು ಶ್ರಮ ವ್ಯಯಿಸಲಾಗಿದೆ. ರಾಷ್ಟ್ರೀಯ ನಾಯಕ ಕೆ.ಎಚ್.ಮುನಿಯಪ್ಪ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿ ಗೊಂದಲಕ್ಕೆ ಕಾರಣವಾಗಿದೆ. ಹಿರಿಯ ರಾಜಕೀಯ ನಾಯಕರಿಗೆ ಪಕ್ಷಕ್ಕಾಗಿ ದುಡಿಯುತ್ತಿರುವ ಸ್ಥಳೀಯರಿಗೆ ಟಿಕೆಟ್ ಬಿಟ್ಟುಕೊಡುವಂತೆ ಮನವಿ ಮಾಡಿಕೊಳ್ಳುತ್ತೇನೆ’ ಎಂದರು.
10 ವರ್ಷದಿಂದ ಕಾಂಗ್ರೆಸ್ ಶಾಸಕರಿಲ್ಲದೇ ಕ್ಷೇತ್ರವು ನಲುಗಿದೆ. ಪಕ್ಷದ ಬಲವರ್ಧನೆಗಾಗಿ ದುಡಿದ ಒಬ್ಬರಿಗೆ ಟಿಕೆಟ್ ಬಿಟ್ಟುಕೊಡುವಂತೆ ಸಭೆಯಲ್ಲಿ ತೀರ್ಮಾನಿಸಿದ್ದೇವೆ. ಈ ಮನವಿಯನ್ನು ಎಲ್ಲರೂ ಒಂದಾಗಿ ಅವರಿಗೆ ಮನವರಿಗೆ ಮಾಡಿಕೊಡಲು ಪ್ರಯತ್ನಿಸಲಾಗುವುದು ಎಂದರು.
‘ನಾನು 20 ವರ್ಷದಿಂದ ಪಕ್ಷಕ್ಕೆ ದುಡಿದಿದ್ದೇನೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಬಲಿಷ್ಠಗೊಳ್ಳಿಸಲು ಎಲ್ಲರೂ ಒಂದಾಗಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ಮಾಡಿಕೊಟ್ಟಲ್ಲಿ ಗೆಲ್ಲಿಸಿಕೊಂಡು ಬರುತ್ತೇವೆ. ರಾಷ್ಟ್ರೀಯ ನಾಯಕರು ಟಿಕೆಟ್ ಬಿಟ್ಟುಕೊಟ್ಟು ಕಾರ್ಯಕರ್ತರ ಬೆಳವಣಿಗೆಗೆ ಸಹಕಾರಿಸಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತ ಕುಮಾರ್ ತಿಳಿಸಿದರು.
ಮುಖಂಡರಾದ ಚೌಡಪನಹಳ್ಳಿ ಲೋಕೇಶ್, ಚಿನ್ನಪ್ಪ ಸೇರಿದಂತೆ ತಾಲ್ಲೂಕಿನ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…
ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್ಕೇರ್…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…