BREAKING NEWS

ಮುನಿಯಪ್ಪಗೆ ಟಿಕೆಟ್‌ : ಬಂಡಾಯ ಸಭೆ

ದೇವನಹಳ್ಳಿ : ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ದೇವನಹಳ್ಳಿ ಪರಿಶಿಷ್ಟ ಮೀಸಲು ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್‌ ಘೋಷಿಸಿರುವುದರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಹಾಗೂ ಟಿಕೆಟ್‌ ಆಕಾಂಕ್ಷಿಗಳು ಪಟ್ಟಣದ ಖಾದಿ ಬೋರ್ಡ್‌ ಕಚೇರಿಯಲ್ಲಿ ಶುಕ್ರವಾರ ಗೋಪ್ಯ ಸಭೆ ನಡೆಸಿದರು.
ಐದು ವರ್ಷಗಳಿಂದ ಕ್ಷೇತ್ರದಲ್ಲಿ ಎಲ್ಲ ಆಕಾಂಕ್ಷಿಗಳು ಸಾಕಷ್ಟು ಜನಪರ ಕೆಲಸ ಮಾಡಿಕೊಂಡು, ಪಕ್ಷ ಸಂಘಟನೆ ಮಾಡಿತ್ತಿದ್ದಾರೆ. ಕಾಂಗ್ರೆಸ್ ಪರ ಜನಾಭಿಪ್ರಾಯ ರೂಪಿಸಲು ಶ್ರಮಿಸಿದ್ದೇವೆ. ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಏಕಿ ಕೆ.ಎಚ್‌.ಮುನಿಯಪ್ಪರಿಗೆ ಟಿಕೆಟ್‌ ಘೋಷಿಸಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.

ಸಭೆಯಲ್ಲಿ ಜಮಾವಣೆಗೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಕೆ.ಎಚ್‌.ಮುನಿಯಪ್ಪ ಅವರಿಗೆ ಬೆಂಬಲ ನೀಡುವ ಬದಲು, ಸ್ಥಳೀಯ ಆಕಾಂಕ್ಷಿ ಒಬ್ಬರಿಗೆ ಅವಕಾಶ ಮಾಡಿಕೊಡಬೇಕು. ದೇವನಹಳ್ಳಿ ಹೊರತಾಗಿ ಬೇರೆಡೆ ಕೆ.ಎಚ್‌.ಮುನಿಯಪ್ಪ ಸ್ಪರ್ಧೆ ಮಾಡಲಿ ಎಂಬ ಚರ್ಚೆಯನ್ನು ತಾಸುಗಟ್ಟಲೇ ನಡೆಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ‘ನನ್ನನ್ನು ಸೇರಿದಂತೆ ಪಕ್ಷದಲ್ಲಿ ಸಾಕಷ್ಟು ಟಿಕೆಟ್‌ ಆಕಾಂಕ್ಷಿಗಳಿದ್ದಾರೆ. ಸತತ 3-4 ವರ್ಷ ಪಕ್ಷವನ್ನು ಬಲಿಷ್ಠಗೊಳ್ಳಿಸಲು ಸಾಕಷ್ಟು ಶ್ರಮ ವ್ಯಯಿಸಲಾಗಿದೆ. ರಾಷ್ಟ್ರೀಯ ನಾಯಕ ಕೆ.ಎಚ್‌.ಮುನಿಯಪ್ಪ ಅವರಿಗೆ ಹೈಕಮಾಂಡ್ ಟಿಕೆಟ್‌ ನೀಡಿ ಗೊಂದಲಕ್ಕೆ ಕಾರಣವಾಗಿದೆ. ಹಿರಿಯ ರಾಜಕೀಯ ನಾಯಕರಿಗೆ ಪಕ್ಷಕ್ಕಾಗಿ ದುಡಿಯುತ್ತಿರುವ ಸ್ಥಳೀಯರಿಗೆ ಟಿಕೆಟ್‌ ಬಿಟ್ಟುಕೊಡುವಂತೆ ಮನವಿ ಮಾಡಿಕೊಳ್ಳುತ್ತೇನೆ’ ಎಂದರು.

10 ವರ್ಷದಿಂದ ಕಾಂಗ್ರೆಸ್‌ ಶಾಸಕರಿಲ್ಲದೇ ಕ್ಷೇತ್ರವು ನಲುಗಿದೆ. ಪಕ್ಷದ ಬಲವರ್ಧನೆಗಾಗಿ ದುಡಿದ ಒಬ್ಬರಿಗೆ ಟಿಕೆಟ್‌ ಬಿಟ್ಟುಕೊಡುವಂತೆ ಸಭೆಯಲ್ಲಿ ತೀರ್ಮಾನಿಸಿದ್ದೇವೆ. ಈ ಮನವಿಯನ್ನು ಎಲ್ಲರೂ ಒಂದಾಗಿ ಅವರಿಗೆ ಮನವರಿಗೆ ಮಾಡಿಕೊಡಲು ಪ್ರಯತ್ನಿಸಲಾಗುವುದು ಎಂದರು.

‘ನಾನು 20 ವರ್ಷದಿಂದ ಪಕ್ಷಕ್ಕೆ ದುಡಿದಿದ್ದೇನೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಬಲಿಷ್ಠಗೊಳ್ಳಿಸಲು ಎಲ್ಲರೂ ಒಂದಾಗಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ಮಾಡಿಕೊಟ್ಟಲ್ಲಿ ಗೆಲ್ಲಿಸಿಕೊಂಡು ಬರುತ್ತೇವೆ. ರಾಷ್ಟ್ರೀಯ ನಾಯಕರು ಟಿಕೆಟ್‌ ಬಿಟ್ಟುಕೊಟ್ಟು ಕಾರ್ಯಕರ್ತರ ಬೆಳವಣಿಗೆಗೆ ಸಹಕಾರಿಸಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತ ಕುಮಾರ್‌ ತಿಳಿಸಿದರು.

ಮುಖಂಡರಾದ ಚೌಡಪನಹಳ್ಳಿ ಲೋಕೇಶ್, ಚಿನ್ನಪ್ಪ ಸೇರಿದಂತೆ ತಾಲ್ಲೂಕಿನ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.

lokesh

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

22 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

28 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

37 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago