BREAKING NEWS

ಮುನಿಯಪ್ಪಗೆ ಟಿಕೆಟ್‌ : ಬಂಡಾಯ ಸಭೆ

ದೇವನಹಳ್ಳಿ : ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ದೇವನಹಳ್ಳಿ ಪರಿಶಿಷ್ಟ ಮೀಸಲು ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್‌ ಘೋಷಿಸಿರುವುದರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಹಾಗೂ ಟಿಕೆಟ್‌ ಆಕಾಂಕ್ಷಿಗಳು ಪಟ್ಟಣದ ಖಾದಿ ಬೋರ್ಡ್‌ ಕಚೇರಿಯಲ್ಲಿ ಶುಕ್ರವಾರ ಗೋಪ್ಯ ಸಭೆ ನಡೆಸಿದರು.
ಐದು ವರ್ಷಗಳಿಂದ ಕ್ಷೇತ್ರದಲ್ಲಿ ಎಲ್ಲ ಆಕಾಂಕ್ಷಿಗಳು ಸಾಕಷ್ಟು ಜನಪರ ಕೆಲಸ ಮಾಡಿಕೊಂಡು, ಪಕ್ಷ ಸಂಘಟನೆ ಮಾಡಿತ್ತಿದ್ದಾರೆ. ಕಾಂಗ್ರೆಸ್ ಪರ ಜನಾಭಿಪ್ರಾಯ ರೂಪಿಸಲು ಶ್ರಮಿಸಿದ್ದೇವೆ. ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಏಕಿ ಕೆ.ಎಚ್‌.ಮುನಿಯಪ್ಪರಿಗೆ ಟಿಕೆಟ್‌ ಘೋಷಿಸಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.

ಸಭೆಯಲ್ಲಿ ಜಮಾವಣೆಗೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಕೆ.ಎಚ್‌.ಮುನಿಯಪ್ಪ ಅವರಿಗೆ ಬೆಂಬಲ ನೀಡುವ ಬದಲು, ಸ್ಥಳೀಯ ಆಕಾಂಕ್ಷಿ ಒಬ್ಬರಿಗೆ ಅವಕಾಶ ಮಾಡಿಕೊಡಬೇಕು. ದೇವನಹಳ್ಳಿ ಹೊರತಾಗಿ ಬೇರೆಡೆ ಕೆ.ಎಚ್‌.ಮುನಿಯಪ್ಪ ಸ್ಪರ್ಧೆ ಮಾಡಲಿ ಎಂಬ ಚರ್ಚೆಯನ್ನು ತಾಸುಗಟ್ಟಲೇ ನಡೆಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ‘ನನ್ನನ್ನು ಸೇರಿದಂತೆ ಪಕ್ಷದಲ್ಲಿ ಸಾಕಷ್ಟು ಟಿಕೆಟ್‌ ಆಕಾಂಕ್ಷಿಗಳಿದ್ದಾರೆ. ಸತತ 3-4 ವರ್ಷ ಪಕ್ಷವನ್ನು ಬಲಿಷ್ಠಗೊಳ್ಳಿಸಲು ಸಾಕಷ್ಟು ಶ್ರಮ ವ್ಯಯಿಸಲಾಗಿದೆ. ರಾಷ್ಟ್ರೀಯ ನಾಯಕ ಕೆ.ಎಚ್‌.ಮುನಿಯಪ್ಪ ಅವರಿಗೆ ಹೈಕಮಾಂಡ್ ಟಿಕೆಟ್‌ ನೀಡಿ ಗೊಂದಲಕ್ಕೆ ಕಾರಣವಾಗಿದೆ. ಹಿರಿಯ ರಾಜಕೀಯ ನಾಯಕರಿಗೆ ಪಕ್ಷಕ್ಕಾಗಿ ದುಡಿಯುತ್ತಿರುವ ಸ್ಥಳೀಯರಿಗೆ ಟಿಕೆಟ್‌ ಬಿಟ್ಟುಕೊಡುವಂತೆ ಮನವಿ ಮಾಡಿಕೊಳ್ಳುತ್ತೇನೆ’ ಎಂದರು.

10 ವರ್ಷದಿಂದ ಕಾಂಗ್ರೆಸ್‌ ಶಾಸಕರಿಲ್ಲದೇ ಕ್ಷೇತ್ರವು ನಲುಗಿದೆ. ಪಕ್ಷದ ಬಲವರ್ಧನೆಗಾಗಿ ದುಡಿದ ಒಬ್ಬರಿಗೆ ಟಿಕೆಟ್‌ ಬಿಟ್ಟುಕೊಡುವಂತೆ ಸಭೆಯಲ್ಲಿ ತೀರ್ಮಾನಿಸಿದ್ದೇವೆ. ಈ ಮನವಿಯನ್ನು ಎಲ್ಲರೂ ಒಂದಾಗಿ ಅವರಿಗೆ ಮನವರಿಗೆ ಮಾಡಿಕೊಡಲು ಪ್ರಯತ್ನಿಸಲಾಗುವುದು ಎಂದರು.

‘ನಾನು 20 ವರ್ಷದಿಂದ ಪಕ್ಷಕ್ಕೆ ದುಡಿದಿದ್ದೇನೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಬಲಿಷ್ಠಗೊಳ್ಳಿಸಲು ಎಲ್ಲರೂ ಒಂದಾಗಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ಮಾಡಿಕೊಟ್ಟಲ್ಲಿ ಗೆಲ್ಲಿಸಿಕೊಂಡು ಬರುತ್ತೇವೆ. ರಾಷ್ಟ್ರೀಯ ನಾಯಕರು ಟಿಕೆಟ್‌ ಬಿಟ್ಟುಕೊಟ್ಟು ಕಾರ್ಯಕರ್ತರ ಬೆಳವಣಿಗೆಗೆ ಸಹಕಾರಿಸಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತ ಕುಮಾರ್‌ ತಿಳಿಸಿದರು.

ಮುಖಂಡರಾದ ಚೌಡಪನಹಳ್ಳಿ ಲೋಕೇಶ್, ಚಿನ್ನಪ್ಪ ಸೇರಿದಂತೆ ತಾಲ್ಲೂಕಿನ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.

lokesh

Recent Posts

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

29 mins ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

2 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

5 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

6 hours ago