BREAKING NEWS

ಬಿಜೆಪಿಯಿಂದ 20ಕ್ಕೂ ಅಧಿಕ ಮಂದಿ ಕುಟುಂಬ ಸದಸ್ಯರಿಗೆ ಟಿಕೆಟ್‌: ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್‌

ಬೆಂಗಳೂರು: ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿರುವ ಜೆಡಿಎಸ್‌ ಈ ಬಾರಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಷ್ಟು ಮಂದಿ ಕುಟುಂಬ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್‌ ನೀಡಲಾಗಿದೆ ಎಂದು ಬಹಿರಂಗಪಡಿಸಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ಕರ್ನಾಟಕಕ್ಕೆ ಬಂದಾಗೆಲ್ಲಾ ಕುಟುಂಬ ರಾಜಕಾರಣ ಎಂದು ನಿರಂತರ ಬೊಬ್ಬಿರಿಯುವ ಗೃಹ ಸಚಿವ ಅಮಿತ್‌ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಹೇಳುವುದು ಒಂದು, ಮಾಡುವುದು ಒಂದು. ರಾಜ್ಯ ಚುನಾವಣೆಗೆ ಬಿಜೆಪಿ ಕರ್ನಾಟಕದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿರುವ ಪಟ್ಟಿ ನೀಡಿದ್ದೇವೆ, ಬಿಜೆಪಿ ನಾಯಕರು ನೈತಿಕತೆಯನ್ನು ಪ್ರಶ್ನಿಸಿಕೊಳ್ಳಲಿ ಎಂದು ತಿರುಗೇಟು ನೀಡಿದೆ.

ಜೆಡಿಎಸ್‌ ಬಿಡುಗಡೆ ಮಾಡಿರುವ ಪಟ್ಟಿ ಹೀಗಿದೆ

1. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕುಟುಂಬ ರಾಜಕಾರಣದ ಕೂಸು, ಅವರ ತಂದೆ ಮಾಜಿ ಸಿಎಂ ಆಗಿದ್ದವರು.
2. ಬಿಎಸ್‌ ಯಡಿಯೂರಪ್ಪ ತನ್ನ ಪುತ್ರನಿಗೆ ಶಾಸಕ ಟಿಕೆಟ್ ಕೊಡಿಸಲು ಯಶಸ್ವಿಯಾಗಿದ್ದು, ಅವರ ಮತ್ತೊಬ್ಬ ಪುತ್ರ ಸಂಸದರಾಗಿದ್ದಾರೆ.
3. ಶಾಸಕ ರವಿ ಸುಬ್ರಹ್ಮಣ್ಯ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದ್ದು, ಅವರ ಸೋದರನ ಮಗ ತೇಜಸ್ವಿ ಸೂರ್ಯ ಸಂಸದರಾಗಿದ್ದಾರೆ.
4. ಎಂಎಲ್‌ಎ ಜ್ಯೋತಿ ಗಣೇಶ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ, ಅವರ ತಂದೆ ಬಸವರಾಜ್ ಸಂಸದರಾಗಿದ್ದಾರೆ.
5. ಇಬ್ಬರು ಜಾರಕಿಹೊಳಿ ಸಹೋದರರಿಗೆ ಮತ್ತೆ ಎಂಎಲ್‌ಎ ಟಿಕೆಟ್ ನೀಡಲಾಗಿದೆ.

6. ಕತ್ತಿ ಕುಟುಂಬದಲ್ಲಿ, ಉಮೇಶ್ ಕತ್ತಿ ಅವರ ಮಗ ಹಾಗೂ ಸಹೋದರನಿಗೆ ಎಂಎಲ್‌ಎ ಟಿಕೆಟ್ ನೀಡಲಾಗಿದೆ.
7. ಇಬ್ಬರು ರೆಡ್ಡಿ ಸಹೋದರರಿಗೆ ಎಂಎಲ್ಎ ಟಿಕೆಟ್ ನೀಡಲಾಗಿದೆ.
8. ಹರ್ಷವರ್ಧನ್‌ಗೆ ಎಂಎಲ್‌ಎ ಟಿಕೆಟ್ ನೀಡಲಾಗಿದ್ದು, ಅವರ ಮಾವ ಶ್ರೀನಿವಾಸ್ ಪ್ರಸಾದ್ ಸಂಸದರಾಗಿದ್ದಾರೆ.
9. ಬಿಜೆಪಿ ಸಂಸದ ಅಣ್ಣಾಸಾಹೇಬರ ಪತ್ನಿ ಶಶಿಕಲಾ ಜೊಲ್ಲೆಗೆ ಟಿಕೆಟ್ ನೀಡಲಾಗಿದೆ.
10. ಮಾಜಿ ಸಚಿವರ ಪುತ್ರ ಪ್ರೀತಂ ನಾಗಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
11. ಸಂಸದ ಉಮೇಶ್ ಜಾಧವ್ ಮಗ ಅವಿನಾಶ್ ಜಾಧವ್‌ಗೆ ಟಿಕೆಟ್ ನೀಡಲಾಗಿದೆ.
12. ಮಾಜಿ ಸಿಎಂ ಮಗ ಕುಮಾರ್ ಬಂಗಾರಪ್ಪ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.
13. ಮಾಜಿ ಸಚಿವರ ಮಗ ದತ್ತಾತ್ರೇಯ ಪಾಟೀಲ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.
14. ಸುರೇಶ್ ಬಾಬು ಮತ್ತು ಶ್ರೀರಾಮುಲು, ಅವರ ಸೋದರಳಿಯ ಮತ್ತು ಚಿಕ್ಕಪ್ಪನಿಗೆ ಟಿಕೆಟ್ ನೀಡಲಾಗಿದೆ.
15. ಮಾಜಿ ಶಾಸಕನ ಪುತ್ರ ಅರವಿಂದ್ ಬೆಲ್ಲದ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.
16. ಚಂದ್ರಕಾಂತ ಪಾಟೀಲ್‌ಗೆ ಟಿಕೆಟ್ ನೀಡಲಾಗಿದ್ದು, ಅವರು ತಂದೆ ಶಾಸಕ.

17. ಮಾಜಿ ಸಚಿವರ ಮಗ ಸಪ್ತಗಿರಿ ಗೌಡರಿಗೆ ಟಿಕೆಟ್.
18. ಮಾಜಿ ಶಾಸಕರ ಪುತ್ರ ಅಮೃತ್ ದೇಸಾಯಿಗೆ ಮತ್ತೆ ಟಿಕೆಟ್.
19. ಸಚಿವ ಆನಂದ್ ಸಿಂಗ್ ಅವರ ಮಗ ಸಿದ್ದಾರ್ಥ್ ಸಿಂಗ್‌ಗೆ ಟಿಕೆಟ್.
20. ಮಾಜಿ ಸಚಿವರ ಪುತ್ರಿ ಪೂರ್ಣಿಮಾ ಶ್ರೀನಿವಾಸ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.

andolanait

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

11 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

12 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

12 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

13 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

13 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

14 hours ago