BREAKING NEWS

ಬಿಜೆಪಿಯಿಂದ 20ಕ್ಕೂ ಅಧಿಕ ಮಂದಿ ಕುಟುಂಬ ಸದಸ್ಯರಿಗೆ ಟಿಕೆಟ್‌: ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್‌

ಬೆಂಗಳೂರು: ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿರುವ ಜೆಡಿಎಸ್‌ ಈ ಬಾರಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಷ್ಟು ಮಂದಿ ಕುಟುಂಬ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್‌ ನೀಡಲಾಗಿದೆ ಎಂದು ಬಹಿರಂಗಪಡಿಸಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ಕರ್ನಾಟಕಕ್ಕೆ ಬಂದಾಗೆಲ್ಲಾ ಕುಟುಂಬ ರಾಜಕಾರಣ ಎಂದು ನಿರಂತರ ಬೊಬ್ಬಿರಿಯುವ ಗೃಹ ಸಚಿವ ಅಮಿತ್‌ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಹೇಳುವುದು ಒಂದು, ಮಾಡುವುದು ಒಂದು. ರಾಜ್ಯ ಚುನಾವಣೆಗೆ ಬಿಜೆಪಿ ಕರ್ನಾಟಕದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿರುವ ಪಟ್ಟಿ ನೀಡಿದ್ದೇವೆ, ಬಿಜೆಪಿ ನಾಯಕರು ನೈತಿಕತೆಯನ್ನು ಪ್ರಶ್ನಿಸಿಕೊಳ್ಳಲಿ ಎಂದು ತಿರುಗೇಟು ನೀಡಿದೆ.

ಜೆಡಿಎಸ್‌ ಬಿಡುಗಡೆ ಮಾಡಿರುವ ಪಟ್ಟಿ ಹೀಗಿದೆ

1. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕುಟುಂಬ ರಾಜಕಾರಣದ ಕೂಸು, ಅವರ ತಂದೆ ಮಾಜಿ ಸಿಎಂ ಆಗಿದ್ದವರು.
2. ಬಿಎಸ್‌ ಯಡಿಯೂರಪ್ಪ ತನ್ನ ಪುತ್ರನಿಗೆ ಶಾಸಕ ಟಿಕೆಟ್ ಕೊಡಿಸಲು ಯಶಸ್ವಿಯಾಗಿದ್ದು, ಅವರ ಮತ್ತೊಬ್ಬ ಪುತ್ರ ಸಂಸದರಾಗಿದ್ದಾರೆ.
3. ಶಾಸಕ ರವಿ ಸುಬ್ರಹ್ಮಣ್ಯ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದ್ದು, ಅವರ ಸೋದರನ ಮಗ ತೇಜಸ್ವಿ ಸೂರ್ಯ ಸಂಸದರಾಗಿದ್ದಾರೆ.
4. ಎಂಎಲ್‌ಎ ಜ್ಯೋತಿ ಗಣೇಶ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ, ಅವರ ತಂದೆ ಬಸವರಾಜ್ ಸಂಸದರಾಗಿದ್ದಾರೆ.
5. ಇಬ್ಬರು ಜಾರಕಿಹೊಳಿ ಸಹೋದರರಿಗೆ ಮತ್ತೆ ಎಂಎಲ್‌ಎ ಟಿಕೆಟ್ ನೀಡಲಾಗಿದೆ.

6. ಕತ್ತಿ ಕುಟುಂಬದಲ್ಲಿ, ಉಮೇಶ್ ಕತ್ತಿ ಅವರ ಮಗ ಹಾಗೂ ಸಹೋದರನಿಗೆ ಎಂಎಲ್‌ಎ ಟಿಕೆಟ್ ನೀಡಲಾಗಿದೆ.
7. ಇಬ್ಬರು ರೆಡ್ಡಿ ಸಹೋದರರಿಗೆ ಎಂಎಲ್ಎ ಟಿಕೆಟ್ ನೀಡಲಾಗಿದೆ.
8. ಹರ್ಷವರ್ಧನ್‌ಗೆ ಎಂಎಲ್‌ಎ ಟಿಕೆಟ್ ನೀಡಲಾಗಿದ್ದು, ಅವರ ಮಾವ ಶ್ರೀನಿವಾಸ್ ಪ್ರಸಾದ್ ಸಂಸದರಾಗಿದ್ದಾರೆ.
9. ಬಿಜೆಪಿ ಸಂಸದ ಅಣ್ಣಾಸಾಹೇಬರ ಪತ್ನಿ ಶಶಿಕಲಾ ಜೊಲ್ಲೆಗೆ ಟಿಕೆಟ್ ನೀಡಲಾಗಿದೆ.
10. ಮಾಜಿ ಸಚಿವರ ಪುತ್ರ ಪ್ರೀತಂ ನಾಗಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
11. ಸಂಸದ ಉಮೇಶ್ ಜಾಧವ್ ಮಗ ಅವಿನಾಶ್ ಜಾಧವ್‌ಗೆ ಟಿಕೆಟ್ ನೀಡಲಾಗಿದೆ.
12. ಮಾಜಿ ಸಿಎಂ ಮಗ ಕುಮಾರ್ ಬಂಗಾರಪ್ಪ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.
13. ಮಾಜಿ ಸಚಿವರ ಮಗ ದತ್ತಾತ್ರೇಯ ಪಾಟೀಲ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.
14. ಸುರೇಶ್ ಬಾಬು ಮತ್ತು ಶ್ರೀರಾಮುಲು, ಅವರ ಸೋದರಳಿಯ ಮತ್ತು ಚಿಕ್ಕಪ್ಪನಿಗೆ ಟಿಕೆಟ್ ನೀಡಲಾಗಿದೆ.
15. ಮಾಜಿ ಶಾಸಕನ ಪುತ್ರ ಅರವಿಂದ್ ಬೆಲ್ಲದ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.
16. ಚಂದ್ರಕಾಂತ ಪಾಟೀಲ್‌ಗೆ ಟಿಕೆಟ್ ನೀಡಲಾಗಿದ್ದು, ಅವರು ತಂದೆ ಶಾಸಕ.

17. ಮಾಜಿ ಸಚಿವರ ಮಗ ಸಪ್ತಗಿರಿ ಗೌಡರಿಗೆ ಟಿಕೆಟ್.
18. ಮಾಜಿ ಶಾಸಕರ ಪುತ್ರ ಅಮೃತ್ ದೇಸಾಯಿಗೆ ಮತ್ತೆ ಟಿಕೆಟ್.
19. ಸಚಿವ ಆನಂದ್ ಸಿಂಗ್ ಅವರ ಮಗ ಸಿದ್ದಾರ್ಥ್ ಸಿಂಗ್‌ಗೆ ಟಿಕೆಟ್.
20. ಮಾಜಿ ಸಚಿವರ ಪುತ್ರಿ ಪೂರ್ಣಿಮಾ ಶ್ರೀನಿವಾಸ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago