ಇಂದು ( ನವೆಂಬರ್ 24 ) ಬೆಳಗ್ಗೆಯಷ್ಟೇ ನಂಜನಗೂಡಿನ ಸುತ್ತಮುತ್ತ ಹುಲಿ ಓಡಾಡಿದೆ ಎಂಬ ಸುದ್ದಿ ಅಲ್ಲಿನ ಜನರಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಈ ಆತಂಕದಲ್ಲಿಯೇ ದಿನಚರಿ ಆರಂಭಿಸಿದ್ದ ಜನತೆಗೆ ಇದೀಗ ಮಹಿಳೆಯೊಬ್ಬರು ಹುಲಿ ದಾಳಿಗೆ ಬಲಿಯಾದ ಸುದ್ದಿ ಮತ್ತಷ್ಟು ಚಿಂತೆಯನ್ನು ತಂದೊಡ್ಡಿದೆ.
ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ರತ್ಮಮ್ಮ ಎಂಬ ಮಹಿಳೆ ಹುಲಿ ದಾಳಿಗೆ ಸಿಲುಕಿ ಅಸು ನೀಗಿದ್ದಾರೆ. ಹುಲಿ ದಾಳಿಯ ತೀವ್ರತೆ ದೊಡ್ಡ ಮಟ್ಟದಲ್ಲಿದ್ದು ಮೃತ ಮಹಿಳೆಯ ಎಡ ಕಾಲನ್ನು ಹುಲಿ ಅರ್ಧದಷ್ಟು ತಿಂದು ಹಾಕಿದೆ.
ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿ ಹೊತ್ತೊಯ್ದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಸಮೀಪವಿರುವ ಬಳ್ಳೂರುಹುಂಡಿ ಗ್ರಾಮಕ್ಕೆ ಹೊಂದಿಕೊಂಡಂತಿರುವ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ಈ ದುರ್ಘಟನೆ ನಡೆದಿದೆ. ನರಭಕ್ಷಕ ಹುಲಿಗೆ ಬಲಿಯಾದ ರತ್ನಮ್ಮಳ ಮೃತದೇಹವನ್ನು ಅರಣ್ಯಾಧಿಕಾರಿಗಳಾದ ಪರಮೇಶ್ವರ ಹಾಗೂ ಎ ಟಿ ನಾರಾಯಣರ ತಂಡ ಪತ್ತೆ ಹಚ್ಚಿದೆ. ಕೆಲ ದಿನಗಳ ಹಿಂದೆ ಇದೇ ಸ್ಥಳದಲ್ಲಿ ವೀರಭದ್ರ ಭೋವಿ ಎಂಬ ದನ ಗಾಹಿ ಮೇಲೂ ಸಹ ಹುಲಿ ದಾಳಿ ನಡೆಸಿತ್ತು. ಹೀಗೆ ಈ ಹಿಂದೆ ಹುಲಿ ದಾಳಿ ನಡೆದಿದ್ದರೂ ಅದನ್ನು ಹಿಡಿಯದ ಅರಣ್ಯಾಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…