ಇಂದು ( ನವೆಂಬರ್ 24 ) ಬೆಳಗ್ಗೆಯಷ್ಟೇ ನಂಜನಗೂಡಿನ ಸುತ್ತಮುತ್ತ ಹುಲಿ ಓಡಾಡಿದೆ ಎಂಬ ಸುದ್ದಿ ಅಲ್ಲಿನ ಜನರಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಈ ಆತಂಕದಲ್ಲಿಯೇ ದಿನಚರಿ ಆರಂಭಿಸಿದ್ದ ಜನತೆಗೆ ಇದೀಗ ಮಹಿಳೆಯೊಬ್ಬರು ಹುಲಿ ದಾಳಿಗೆ ಬಲಿಯಾದ ಸುದ್ದಿ ಮತ್ತಷ್ಟು ಚಿಂತೆಯನ್ನು ತಂದೊಡ್ಡಿದೆ.
ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ರತ್ಮಮ್ಮ ಎಂಬ ಮಹಿಳೆ ಹುಲಿ ದಾಳಿಗೆ ಸಿಲುಕಿ ಅಸು ನೀಗಿದ್ದಾರೆ. ಹುಲಿ ದಾಳಿಯ ತೀವ್ರತೆ ದೊಡ್ಡ ಮಟ್ಟದಲ್ಲಿದ್ದು ಮೃತ ಮಹಿಳೆಯ ಎಡ ಕಾಲನ್ನು ಹುಲಿ ಅರ್ಧದಷ್ಟು ತಿಂದು ಹಾಕಿದೆ.
ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿ ಹೊತ್ತೊಯ್ದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಸಮೀಪವಿರುವ ಬಳ್ಳೂರುಹುಂಡಿ ಗ್ರಾಮಕ್ಕೆ ಹೊಂದಿಕೊಂಡಂತಿರುವ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ಈ ದುರ್ಘಟನೆ ನಡೆದಿದೆ. ನರಭಕ್ಷಕ ಹುಲಿಗೆ ಬಲಿಯಾದ ರತ್ನಮ್ಮಳ ಮೃತದೇಹವನ್ನು ಅರಣ್ಯಾಧಿಕಾರಿಗಳಾದ ಪರಮೇಶ್ವರ ಹಾಗೂ ಎ ಟಿ ನಾರಾಯಣರ ತಂಡ ಪತ್ತೆ ಹಚ್ಚಿದೆ. ಕೆಲ ದಿನಗಳ ಹಿಂದೆ ಇದೇ ಸ್ಥಳದಲ್ಲಿ ವೀರಭದ್ರ ಭೋವಿ ಎಂಬ ದನ ಗಾಹಿ ಮೇಲೂ ಸಹ ಹುಲಿ ದಾಳಿ ನಡೆಸಿತ್ತು. ಹೀಗೆ ಈ ಹಿಂದೆ ಹುಲಿ ದಾಳಿ ನಡೆದಿದ್ದರೂ ಅದನ್ನು ಹಿಡಿಯದ ಅರಣ್ಯಾಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…