BREAKING NEWS

ನಂಜನಗೂಡಿನಲ್ಲಿ ನರಭಕ್ಷಕ ಹುಲಿಗೆ ಮಹಿಳೆ ಬಲಿ

ಇಂದು ( ನವೆಂಬರ್‌ 24 ) ಬೆಳಗ್ಗೆಯಷ್ಟೇ ನಂಜನಗೂಡಿನ ಸುತ್ತಮುತ್ತ ಹುಲಿ ಓಡಾಡಿದೆ ಎಂಬ ಸುದ್ದಿ ಅಲ್ಲಿನ ಜನರಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಈ ಆತಂಕದಲ್ಲಿಯೇ ದಿನಚರಿ ಆರಂಭಿಸಿದ್ದ ಜನತೆಗೆ ಇದೀಗ ಮಹಿಳೆಯೊಬ್ಬರು ಹುಲಿ ದಾಳಿಗೆ ಬಲಿಯಾದ ಸುದ್ದಿ ಮತ್ತಷ್ಟು ಚಿಂತೆಯನ್ನು ತಂದೊಡ್ಡಿದೆ.

ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ರತ್ಮಮ್ಮ ಎಂಬ ಮಹಿಳೆ ಹುಲಿ ದಾಳಿಗೆ ಸಿಲುಕಿ ಅಸು ನೀಗಿದ್ದಾರೆ. ಹುಲಿ ದಾಳಿಯ ತೀವ್ರತೆ ದೊಡ್ಡ ಮಟ್ಟದಲ್ಲಿದ್ದು ಮೃತ ಮಹಿಳೆಯ ಎಡ ಕಾಲನ್ನು ಹುಲಿ ಅರ್ಧದಷ್ಟು ತಿಂದು ಹಾಕಿದೆ.

ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿ ಹೊತ್ತೊಯ್ದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಸಮೀಪವಿರುವ ಬಳ್ಳೂರುಹುಂಡಿ ಗ್ರಾಮಕ್ಕೆ ಹೊಂದಿಕೊಂಡಂತಿರುವ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ಈ ದುರ್ಘಟನೆ ನಡೆದಿದೆ. ನರಭಕ್ಷಕ ಹುಲಿಗೆ ಬಲಿಯಾದ ರತ್ನಮ್ಮಳ ಮೃತದೇಹವನ್ನು ಅರಣ್ಯಾಧಿಕಾರಿಗಳಾದ ಪರಮೇಶ್ವರ ಹಾಗೂ ಎ ಟಿ ನಾರಾಯಣರ ತಂಡ ಪತ್ತೆ ಹಚ್ಚಿದೆ. ಕೆಲ ದಿನಗಳ ಹಿಂದೆ ಇದೇ ಸ್ಥಳದಲ್ಲಿ ವೀರಭದ್ರ ಭೋವಿ ಎಂಬ ದನ ಗಾಹಿ ಮೇಲೂ ಸಹ ಹುಲಿ ದಾಳಿ ನಡೆಸಿತ್ತು. ಹೀಗೆ ಈ ಹಿಂದೆ ಹುಲಿ ದಾಳಿ ನಡೆದಿದ್ದರೂ ಅದನ್ನು ಹಿಡಿಯದ ಅರಣ್ಯಾಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

andolana

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

19 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

19 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

19 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

19 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

19 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

19 hours ago