BREAKING NEWS

ಕಾಂಗ್ರೆಸ್ ಗ್ಯಾರೆಂಟಿ ಮೇಲಿನ ಚರ್ಚೆಗೆ ಸಮಯ ನಿಗದಿ: ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿ

ಬೆಂಗಳೂರು: ಕಾಂಗ್ರೆಸ್‌ನ ಐದು ‘ಖಾತರಿ’ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಗೆ ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.

ಕಾಂಗ್ರೆಸ್‌ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ನೋಟಿಸ್ ನೀಡಿದ್ದೇವೆ. ಪ್ರಶ್ನೋತ್ತರ ಕಲಾಪವನ್ನು ಬದಿಗೊತ್ತಿ ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ ಆಗ್ರಹಿಸಿದರು.

ನಿಯಮಗಳ ಪ್ರಕಾರ, ಪ್ರಶ್ನೋತ್ತರ, ಶೂನ್ಯವೇಳೆಯ ಬಳಿಕವೇ ಚರ್ಚೆಗೆ ಅವಕಾಶ ನೀಡಲು ಸಾಧ್ಯ. ಪ್ರಶ್ನೋತ್ತರಕ್ಕೆ ಸಹಕರಿಸಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಇದು ಮಂಗಳವಾರ ಕಲಾಪಕ್ಕೆ ಅಡ್ಡಿಯುಂಟಾಯಿತು. ಅಲ್ಲದೆ, ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಕೋಲಾಹಲಕ್ಕೆ ಕಾರಣವಾಯಿತು.

ಇಂದು ಬೆಳಗ್ಗೆ ಕಲಾಪ ಆರಂಭವಾದ ಕೂಡಲೇ ಬಿಜೆಪಿ ಶಾಸಕರು ಈ ವಿಷಯದ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದರು.
ಬಳಿಕ ಶೂನ್ಯವೇಳೆ ನಂತರ ಸಮಯಾವಕಾಶ ನೀಡಲು ಸ್ಪೀಕರ್ ಯುಟಿ ಖಾದರ್ ಒಪ್ಪಿಗೆ ಸೂಚಿಸಿದ ಬಳಿಕ ಬಿಜೆಪಿ ಪ್ರತಿಭಟನೆ ಹಿಂಪಡೆದಿದೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago