BREAKING NEWS

ಕಾಂಗ್ರೆಸ್ ಗ್ಯಾರೆಂಟಿ ಮೇಲಿನ ಚರ್ಚೆಗೆ ಸಮಯ ನಿಗದಿ: ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿ

ಬೆಂಗಳೂರು: ಕಾಂಗ್ರೆಸ್‌ನ ಐದು ‘ಖಾತರಿ’ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಗೆ ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.

ಕಾಂಗ್ರೆಸ್‌ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ನೋಟಿಸ್ ನೀಡಿದ್ದೇವೆ. ಪ್ರಶ್ನೋತ್ತರ ಕಲಾಪವನ್ನು ಬದಿಗೊತ್ತಿ ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ ಆಗ್ರಹಿಸಿದರು.

ನಿಯಮಗಳ ಪ್ರಕಾರ, ಪ್ರಶ್ನೋತ್ತರ, ಶೂನ್ಯವೇಳೆಯ ಬಳಿಕವೇ ಚರ್ಚೆಗೆ ಅವಕಾಶ ನೀಡಲು ಸಾಧ್ಯ. ಪ್ರಶ್ನೋತ್ತರಕ್ಕೆ ಸಹಕರಿಸಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಇದು ಮಂಗಳವಾರ ಕಲಾಪಕ್ಕೆ ಅಡ್ಡಿಯುಂಟಾಯಿತು. ಅಲ್ಲದೆ, ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಕೋಲಾಹಲಕ್ಕೆ ಕಾರಣವಾಯಿತು.

ಇಂದು ಬೆಳಗ್ಗೆ ಕಲಾಪ ಆರಂಭವಾದ ಕೂಡಲೇ ಬಿಜೆಪಿ ಶಾಸಕರು ಈ ವಿಷಯದ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದರು.
ಬಳಿಕ ಶೂನ್ಯವೇಳೆ ನಂತರ ಸಮಯಾವಕಾಶ ನೀಡಲು ಸ್ಪೀಕರ್ ಯುಟಿ ಖಾದರ್ ಒಪ್ಪಿಗೆ ಸೂಚಿಸಿದ ಬಳಿಕ ಬಿಜೆಪಿ ಪ್ರತಿಭಟನೆ ಹಿಂಪಡೆದಿದೆ.

andolanait

Recent Posts

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

55 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

1 hour ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

1 hour ago

ಒಂದು ಹಸಿ ಅಸಹ್ಯ ಹಾಡಿನ ಕುರಿತು ಇಬ್ಬರು ಬರಹಗಾರ್ತಿಯರು

ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…

1 hour ago

ಕೆಟ್ಟ ಯುದ್ಧವೊಂದರ ಕೆಲವು ಒಳ್ಳೆಯ ಅಡ್ಡ ಪರಿಣಾಮಗಳು

ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…

1 hour ago

ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣೆಗೆ ಕಾರ್ಯತಂತ್ರ

ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…

1 hour ago