BREAKING NEWS

ಕಾಂಗ್ರೆಸ್ ಗ್ಯಾರೆಂಟಿ ಮೇಲಿನ ಚರ್ಚೆಗೆ ಸಮಯ ನಿಗದಿ: ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿ

ಬೆಂಗಳೂರು: ಕಾಂಗ್ರೆಸ್‌ನ ಐದು ‘ಖಾತರಿ’ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಗೆ ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.

ಕಾಂಗ್ರೆಸ್‌ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ನೋಟಿಸ್ ನೀಡಿದ್ದೇವೆ. ಪ್ರಶ್ನೋತ್ತರ ಕಲಾಪವನ್ನು ಬದಿಗೊತ್ತಿ ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ ಆಗ್ರಹಿಸಿದರು.

ನಿಯಮಗಳ ಪ್ರಕಾರ, ಪ್ರಶ್ನೋತ್ತರ, ಶೂನ್ಯವೇಳೆಯ ಬಳಿಕವೇ ಚರ್ಚೆಗೆ ಅವಕಾಶ ನೀಡಲು ಸಾಧ್ಯ. ಪ್ರಶ್ನೋತ್ತರಕ್ಕೆ ಸಹಕರಿಸಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಇದು ಮಂಗಳವಾರ ಕಲಾಪಕ್ಕೆ ಅಡ್ಡಿಯುಂಟಾಯಿತು. ಅಲ್ಲದೆ, ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಕೋಲಾಹಲಕ್ಕೆ ಕಾರಣವಾಯಿತು.

ಇಂದು ಬೆಳಗ್ಗೆ ಕಲಾಪ ಆರಂಭವಾದ ಕೂಡಲೇ ಬಿಜೆಪಿ ಶಾಸಕರು ಈ ವಿಷಯದ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದರು.
ಬಳಿಕ ಶೂನ್ಯವೇಳೆ ನಂತರ ಸಮಯಾವಕಾಶ ನೀಡಲು ಸ್ಪೀಕರ್ ಯುಟಿ ಖಾದರ್ ಒಪ್ಪಿಗೆ ಸೂಚಿಸಿದ ಬಳಿಕ ಬಿಜೆಪಿ ಪ್ರತಿಭಟನೆ ಹಿಂಪಡೆದಿದೆ.

andolanait

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

9 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago