BREAKING NEWS

ಕಾಂಗ್ರೆಸ್ ಗ್ಯಾರೆಂಟಿ ಮೇಲಿನ ಚರ್ಚೆಗೆ ಸಮಯ ನಿಗದಿ: ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿ

ಬೆಂಗಳೂರು: ಕಾಂಗ್ರೆಸ್‌ನ ಐದು ‘ಖಾತರಿ’ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಗೆ ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.

ಕಾಂಗ್ರೆಸ್‌ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ನೋಟಿಸ್ ನೀಡಿದ್ದೇವೆ. ಪ್ರಶ್ನೋತ್ತರ ಕಲಾಪವನ್ನು ಬದಿಗೊತ್ತಿ ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ ಆಗ್ರಹಿಸಿದರು.

ನಿಯಮಗಳ ಪ್ರಕಾರ, ಪ್ರಶ್ನೋತ್ತರ, ಶೂನ್ಯವೇಳೆಯ ಬಳಿಕವೇ ಚರ್ಚೆಗೆ ಅವಕಾಶ ನೀಡಲು ಸಾಧ್ಯ. ಪ್ರಶ್ನೋತ್ತರಕ್ಕೆ ಸಹಕರಿಸಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಇದು ಮಂಗಳವಾರ ಕಲಾಪಕ್ಕೆ ಅಡ್ಡಿಯುಂಟಾಯಿತು. ಅಲ್ಲದೆ, ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಕೋಲಾಹಲಕ್ಕೆ ಕಾರಣವಾಯಿತು.

ಇಂದು ಬೆಳಗ್ಗೆ ಕಲಾಪ ಆರಂಭವಾದ ಕೂಡಲೇ ಬಿಜೆಪಿ ಶಾಸಕರು ಈ ವಿಷಯದ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದರು.
ಬಳಿಕ ಶೂನ್ಯವೇಳೆ ನಂತರ ಸಮಯಾವಕಾಶ ನೀಡಲು ಸ್ಪೀಕರ್ ಯುಟಿ ಖಾದರ್ ಒಪ್ಪಿಗೆ ಸೂಚಿಸಿದ ಬಳಿಕ ಬಿಜೆಪಿ ಪ್ರತಿಭಟನೆ ಹಿಂಪಡೆದಿದೆ.

andolanait

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

8 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

9 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

9 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

9 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

9 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

10 hours ago