ಗುವಾಹಟಿ: ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.
ಇಂದು ಗುವಾಹಟಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಧನಕರ್ ಅವರು, ಸಂವಿಧಾನದ 44ನೇ ವಿಧಿಯು ದೇಶಾದ್ಯಂತ ತನ್ನ ನಾಗರಿಕರ ಸುರಕ್ಷತೆ ಕಲ್ಪಿಸಲು ಯುಸಿಸಿಯ ಬಗ್ಗೆ ಸ್ಪಷ್ಟವಾಗಿ ಹೇಳುತ್ತದೆ ಎಂದರು.
“ಸಂವಿಧಾನದ ಪಿತಾಮಹರ ಆಲೋಚನಾ ಪ್ರಕ್ರಿಯೆಯಲ್ಲೂ ಯುಸಿಸಿಯ ಚಿಂತನೆಗಳಿದ್ದವು. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಅಡ್ಡಿ ಅಥವಾ ಮತ್ತಷ್ಟು ವಿಳಂಬಕ್ಕೆ ಯಾವುದೇ ಕಾರಣವಿಲ್ಲ” ಎಂದು ಅವರು ಹೇಳಿದರು.
“ಸಂವಿಧಾನವನ್ನು ಅನುಸರಿಸಿ, ಯುಸಿಸಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಕೆಲವು ಜನರ ಪ್ರತಿಕ್ರಿಯೆ ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ. ರಾಜಕೀಯ ಹಿತಾಸಕ್ತಿಯು ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಮೇಲೆ ಪರಿಣಾಮ ಬೀರಲು ಸಾಧ್ಯವಿಲ್ಲ’ ಎಂದು ಧನಕರ್ ಹೇಳಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…