ಗುವಾಹಟಿ: ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.
ಇಂದು ಗುವಾಹಟಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಧನಕರ್ ಅವರು, ಸಂವಿಧಾನದ 44ನೇ ವಿಧಿಯು ದೇಶಾದ್ಯಂತ ತನ್ನ ನಾಗರಿಕರ ಸುರಕ್ಷತೆ ಕಲ್ಪಿಸಲು ಯುಸಿಸಿಯ ಬಗ್ಗೆ ಸ್ಪಷ್ಟವಾಗಿ ಹೇಳುತ್ತದೆ ಎಂದರು.
“ಸಂವಿಧಾನದ ಪಿತಾಮಹರ ಆಲೋಚನಾ ಪ್ರಕ್ರಿಯೆಯಲ್ಲೂ ಯುಸಿಸಿಯ ಚಿಂತನೆಗಳಿದ್ದವು. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಅಡ್ಡಿ ಅಥವಾ ಮತ್ತಷ್ಟು ವಿಳಂಬಕ್ಕೆ ಯಾವುದೇ ಕಾರಣವಿಲ್ಲ” ಎಂದು ಅವರು ಹೇಳಿದರು.
“ಸಂವಿಧಾನವನ್ನು ಅನುಸರಿಸಿ, ಯುಸಿಸಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಕೆಲವು ಜನರ ಪ್ರತಿಕ್ರಿಯೆ ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ. ರಾಜಕೀಯ ಹಿತಾಸಕ್ತಿಯು ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಮೇಲೆ ಪರಿಣಾಮ ಬೀರಲು ಸಾಧ್ಯವಿಲ್ಲ’ ಎಂದು ಧನಕರ್ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…