BREAKING NEWS

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಮಯ ಬಂದಿದೆ: ಉಪ ರಾಷ್ಟ್ರಪತಿ ಧನಕರ್

ಗುವಾಹಟಿ: ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.

ಇಂದು ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಧನಕರ್ ಅವರು, ಸಂವಿಧಾನದ 44ನೇ ವಿಧಿಯು ದೇಶಾದ್ಯಂತ ತನ್ನ ನಾಗರಿಕರ ಸುರಕ್ಷತೆ ಕಲ್ಪಿಸಲು ಯುಸಿಸಿಯ ಬಗ್ಗೆ ಸ್ಪಷ್ಟವಾಗಿ ಹೇಳುತ್ತದೆ ಎಂದರು.

“ಸಂವಿಧಾನದ ಪಿತಾಮಹರ ಆಲೋಚನಾ ಪ್ರಕ್ರಿಯೆಯಲ್ಲೂ ಯುಸಿಸಿಯ ಚಿಂತನೆಗಳಿದ್ದವು. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಅಡ್ಡಿ ಅಥವಾ ಮತ್ತಷ್ಟು ವಿಳಂಬಕ್ಕೆ ಯಾವುದೇ ಕಾರಣವಿಲ್ಲ” ಎಂದು ಅವರು ಹೇಳಿದರು.

“ಸಂವಿಧಾನವನ್ನು ಅನುಸರಿಸಿ, ಯುಸಿಸಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಕೆಲವು ಜನರ ಪ್ರತಿಕ್ರಿಯೆ ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ. ರಾಜಕೀಯ ಹಿತಾಸಕ್ತಿಯು ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಮೇಲೆ ಪರಿಣಾಮ ಬೀರಲು ಸಾಧ್ಯವಿಲ್ಲ’ ಎಂದು ಧನಕರ್ ಹೇಳಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago