ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ಟಿಪ್ಪು ಜಯಂತಿ ದೊಡ್ಡ ಸದ್ದು ಮಾಡಿತ್ತು. ಟಿಪ್ಪು ಜಯಂತಿ ಕಾರಣಕ್ಕೆ ರಾಜ್ಯಾದ್ಯಂತ ಪ್ರಕ್ಷುಬ್ಧ ವಾತಾವರಣ ಉಂಟಾಗಿ, ಸಾವು-ನೋವುಗಳೂ ಸಂಭವಿಸಿದ್ದವು. ಈಗ ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದಿದ್ದು, ‘ಈ ಸಲ ಟಿಪ್ಪು ಜಯಂತಿ ನಡೆಯೋದಿಲ್ವಾ?’ ಎಂಬ ಅನುಮಾನ ಉಂಟಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಜ್ಯದಲ್ಲಿ ಹಮ್ಮಿಕೊಳ್ಳಲಿರುವ ಜಯಂತಿಗಳ ಪಟ್ಟಿಯನ್ನು ಸರ್ಕಾರ ಇಂದು ಬಿಡುಗಡೆ ಮಾಡಿದ್ದು, ಅದರಲ್ಲಿ ಒಟ್ಟು 31 ಜಯಂತಿಗಳ ಉಲ್ಲೇಖವಿದೆ. ಆದರೆ ಟಿಪ್ಪು ಜಯಂತಿಯ ಪ್ರಸ್ತಾಪವಿಲ್ಲ. ಹೀಗಾಗಿ ಈ ಸಲ ಟಿಪ್ಪು ಜಯಂತಿ ಆಚರಣೆ ಇದೆಯೋ ಇಲ್ಲವೋ ಎಂಬ ಕುತೂಹಲವೊಂದು ಮೂಡಿದೆ.
ಒಂದು ವೇಳೆ ಆಚರಣೆ ಇದೆ ಎಂದಾದರೆ ಈ ಸಲವೂ ಮತ್ತೆ ವಿವಾದಾತ್ಮಕ ಇಲ್ಲವೇ ಸಂಘರ್ಷಾತ್ಮಕ ವಾತಾವರಣ ಸೃಷ್ಟಿಯಾದರೂ ಅಚ್ಚರಿ ಇಲ್ಲ. ಮತ್ತೊಂದೆಡೆ ಇದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಚರಿಸಲ್ಪಡುವ ಜಯಂತಿಗಳ ವಿವರ. ಟಿಪ್ಪು ಜಯಂತಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮೂಲಕ ಆಚರಿಸಲ್ಪಡಲಿದೆ, ಹೀಗಾಗಿ ಅದು ಈ ಪಟ್ಟಿಯಲ್ಲಿಲ್ಲ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಈಗ ಬಿಡುಗಡೆ ಆಗಿರುವ ಜಯಂತಿಗಳ ಪಟ್ಟಿ ಟಿಪ್ಪು ಜಯಂತಿ ಕುರಿತು ಕುತೂಹಲವನ್ನು ಕೆರಳಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…