ಕೊಳ್ಳೇಗಾಲ : ಗಂಡ ಹೆಂಡತಿ ಜಗಳಕ್ಕೆ ಇಬ್ಬರು ಮಕ್ಕಳ ಜೊತೆ ಪತ್ನಿ ವಿಷ ಸೇವಿಸಿರುವ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಿಷ ಸೇವಿಸಿದವರ ಪೈಕಿ ಸಿಂಧು(8) (ಮಗಳು) ಸಾವನ್ನಪ್ಪಿದ್ದು, ತಾಯಿ ಮಗನ ಸ್ಥಿತಿ ಜಿಂತಾಜನಕವಾಗಿದೆ.
ಮಧುವನಹಳ್ಳಿ ಗ್ರಾಮದ ಷಣ್ಮುಖಸ್ವಾಮಿ ಎಂಬಾತನ ಮಗಳು ಸಿಂಧು(8) ಮೃತ್ತ ದುರ್ದೈವಿ. ಷಣ್ಮುಖಸ್ವಾಮಿ ಪತ್ನಿ ಶೀಲಾ (30) ಹಾಗೂ ಯಶ್ವಂತ್(8) ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈಕೆಯ ಗಂಡ ಮಂಗಳವಾರ ರಾತ್ರಿ ಕುಡಿದು ಬಂದು ಜಗಳವಾಡಿದ್ದಲ್ಲದೇ ಬುಧವಾರ ಬೆಳಿಗ್ಗೆಯೂ ಜಗಳವಾಡಿದ್ದರಿಂದ ಬೇಸತ್ತ ಹೆಂಡತಿ, ಮಕ್ಕಳಿಗೆ ವಿಷ ಕುಡಿಸಿ ತಾನು ವಿಷ ಸೇವಿಸಿದ್ದಾಳೆ. ವಿಷ ಕುಡಿದು ಮನೆಯಲ್ಲಿ ನರಳುತ್ತಿದ್ದವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ.
ಆದರೆ ವಿಷ ಕುಡಿದಿದ್ದ ಸಿಂಧು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ, ಆಕೆಯ ತಾಯಿ ಹಾಗೂ ತಮ್ಮನ ಸ್ಥಿತಿ ಜಿಂತಾಜನಕವಾಗಿದ್ದರಿಂದ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಳ್ಳಲಾಗಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…