ಬೆಂಗಳೂರು: ‘ತಿರುಪತಿ ಮೂಲತಃ ಬೌದ್ಧ ಮಂದಿರ’ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಇತ್ತೀಚೆಗೆ National TV ಎಂಬ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಚೇತನ್ ಈ ಹೇಳಿಕೆ ನೀಡಿದ್ದಾರೆ.
ಅದೇ ಹೇಳಿಕೆಯನ್ನು ಸಮರ್ಥಿಸಿ ವಿಡಿಯೊ ಲಿಂಕ್ ಅನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಅವರು, ‘ಇತ್ತೀಚಿನ ಸಂದರ್ಶನವೊಂದರಲ್ಲಿ, ತಿರುಪತಿ ಮೂಲತಃ ಬೌದ್ಧ ಮಂದಿರ ಎಂದು ನಾನು ಹೇಳಿದ್ದೇನೆ. ಕೆ ಜಮನದಾಸ್ ಅವರು ತಿರುಪತಿ ಬಾಲಾಜಿ ಮೂಲತಃ ಬೌದ್ಧ ಮಂದಿರ’ (ಏಪ್ರಿಲ್ 14, 2001) ಎಂಬ ತಮ್ಮ ಪುಸ್ತಕದಲ್ಲಿ ಈ ಹೇಳಿಕೆಯನ್ನು ಮಾನ್ಯ ಮಾಡಿದ್ದಾರೆ. ಇತಿಹಾಸಕಾರರ ಪ್ರಕಾರ, ದೇವಾಲಯಗಳು ಎಂದಿಗೂ ವೈದಿಕ ಸಂಸ್ಥೆಗಳಾಗಿರಲಿಲ್ಲ – ಅವುಗಳನ್ನು ಬೌದ್ಧ ಧರ್ಮದಿಂದ ವಶಪಡಿಸಿಕೊಳ್ಳಲಾಗಿದೆ, ಆಕ್ರಮಣ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಉರಿಗೌಡ–ನಂಜೇಗೌಡ ವಿಚಾರವಾಗಿ ಚೇತನ್ ಅವರು ಮಾಡಿದ್ದ ಸಾಮಾಜಿಕ ಜಾಲತಾಣದ ಪೋಸ್ಟ್ ವಿರುದ್ಧ ಹಿಂದೂತ್ವವಾದಿ ಕಾರ್ಯಕರ್ತರಿಂದ ಬೆಂಗಳೂರಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…