BREAKING NEWS

ಕೀಳನಪುರದಲ್ಲಿ ಭೀತಿ ಮೂಡಿಸಿದ್ದ ಚಿರತೆ ಸೆರೆ

ಮೈಸೂರು ಜಿಲ್ಲೆಯಲ್ಲಿ ಎರಡು ವಾರದಲ್ಲಿ ಏಳು ಚಿರತೆಗಳು ಬೋನಿಗೆ

ಮೈಸೂರು:ಜಿಲ್ಲೆಯಲ್ಲಿ ಚಿರತೆಯ ಸದ್ದು ಮುಂದುವರಿದಿದೆ. ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆಯೊಂದು ಮಂಗಳವಾರ ಬೋನಿಗೆ ಬಿದ್ದಿದೆ.

ಕಳೆದ 15 ದಿನಗಳಿಂದ ಗ್ರಾಮದ ಸುತ್ತ ಮುತ್ತ ಈ ಚಿರತೆ ಓಡಾಟ ನಡೆಸುತ್ತಿತ್ತು. ಮೂರು ದಿನಗಳ ಹಿಂದೆ ಕರು ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದಾಗಿ ಜನರು ಭೀತಿಗೊಳಗಾಗಿದ್ದರು. ಚಿರತೆ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯಾಧಿಕಾರಿಗಳು ಅದೇ ಕರುವಿನ ಮೃತದೇಹವನ್ನು ಬೋನಿನಲ್ಲಿಟ್ಟು ಚಿರತೆಯ ಬರುವಿಕೆಗೆ ಕಾಯುತ್ತಿದ್ದರು.

ಅಧಿಕಾರಿಗಳ ಎಣಿಕೆಯಂತೆ ಕೀಳನಪುರ ಗ್ರಾಮದ ಪರಶಿವಪ್ಪ ಅವರ ಜಮೀನಿಗೆ ಕರು ಮಾಂಸದ ಆಸೆಯಿಂದ ಬಂದ ಚಿರತೆ ಬೋನಿಗೆ ಬಿದ್ದಿದೆ. ಸೆರೆಯಾದ ಚಿರತೆ ಸುಮಾರು 8 ವರ್ಷದ್ದೆಂದು ಅಂದಾಜಿಸಲಾಗಿದೆ. ಚಿರತೆಯನ್ನು ಸೆರೆ ಹಿಡಿದು ಕಾಲರ್‌ ಅಳವಡಿಸಿ ಮಲಮಹದೇಶ್ವರ ವನ್ಯ ಜೀವಿ ವಿಭಾಗದ ಅರಣ್ಯಕ್ಕೆ ಬಿಡಲಾಗಿದೆ. ಆರ್​ಎಫ್​​ಓ ಸುರೇಂದ್ರ, ಡಿಆರ್‌ಎಫ್‌ಓ ವಿಜಯಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಈ ತಿಂಗಳಲ್ಲಿ ಮೈಸೂರು ತಾಲ್ಲೂಕಿನಲ್ಲಿ ಸೆರೆ ಸಿಕ್ಕಿದ ಏಳನೇ ಚಿರತೆ ಇದಾಗಿದೆ. ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಡಿಸೆಂಬರ್‌ 16 ರಂದು ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಇದಾದ ಮರುದಿನವೇ ಮಾರಶೆಟ್ಟಿ ಗ್ರಾಮದಲ್ಲಿ ಜಾನುವಾರು ಬೇಟೆಯಾಡುತ್ತಿದ್ದ ಮೂರು ವರ್ಷ ಪ್ರಾಯದ ಹೆಣ್ಣು ಚಿರತೆ ಕೊನೆಗೂ ಬೋನಿಗೆ ಬಿದ್ದಿತ್ತು.

ಡಿಸೆಂಬರ್‌ 22ರಂದು ತಿ.ನರಸೀಪುರ ಗ್ರಾಮದ ಮತ್ತತ್ತಿ ಗ್ರಾಮದಲ್ಲಿ ಕೋಳಿ ತಿನ್ನಲು ಬಂದ ಎರಡೂವರೆ ವರ್ಷದ ಚಿರತೆ ಸೆರೆಯಾಗಿತ್ತು.

ಡಿಸೆಂಬರ್‌ 23ರಂದು ತಿ.ನರಸೀಪುರ ತಾಲ್ಲೂಕಿನಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಎಂಟು ವರ್ಷಗಳ ಗಂಡು ಚಿರತೆ ಎಂ.ಎಲ್.ಹುಂಡಿ ಗ್ರಾಮದ ಮಲ್ಲಪ್ಪನ ಬೆಟ್ಟದಲ್ಲಿ ಸೆರೆ ಸಿಕ್ಕಿತ್ತು

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

34 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago