ಮೈಸೂರು ಜಿಲ್ಲೆಯಲ್ಲಿ ಎರಡು ವಾರದಲ್ಲಿ ಏಳು ಚಿರತೆಗಳು ಬೋನಿಗೆ
ಮೈಸೂರು:ಜಿಲ್ಲೆಯಲ್ಲಿ ಚಿರತೆಯ ಸದ್ದು ಮುಂದುವರಿದಿದೆ. ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆಯೊಂದು ಮಂಗಳವಾರ ಬೋನಿಗೆ ಬಿದ್ದಿದೆ.
ಕಳೆದ 15 ದಿನಗಳಿಂದ ಗ್ರಾಮದ ಸುತ್ತ ಮುತ್ತ ಈ ಚಿರತೆ ಓಡಾಟ ನಡೆಸುತ್ತಿತ್ತು. ಮೂರು ದಿನಗಳ ಹಿಂದೆ ಕರು ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದಾಗಿ ಜನರು ಭೀತಿಗೊಳಗಾಗಿದ್ದರು. ಚಿರತೆ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯಾಧಿಕಾರಿಗಳು ಅದೇ ಕರುವಿನ ಮೃತದೇಹವನ್ನು ಬೋನಿನಲ್ಲಿಟ್ಟು ಚಿರತೆಯ ಬರುವಿಕೆಗೆ ಕಾಯುತ್ತಿದ್ದರು.
ಅಧಿಕಾರಿಗಳ ಎಣಿಕೆಯಂತೆ ಕೀಳನಪುರ ಗ್ರಾಮದ ಪರಶಿವಪ್ಪ ಅವರ ಜಮೀನಿಗೆ ಕರು ಮಾಂಸದ ಆಸೆಯಿಂದ ಬಂದ ಚಿರತೆ ಬೋನಿಗೆ ಬಿದ್ದಿದೆ. ಸೆರೆಯಾದ ಚಿರತೆ ಸುಮಾರು 8 ವರ್ಷದ್ದೆಂದು ಅಂದಾಜಿಸಲಾಗಿದೆ. ಚಿರತೆಯನ್ನು ಸೆರೆ ಹಿಡಿದು ಕಾಲರ್ ಅಳವಡಿಸಿ ಮಲಮಹದೇಶ್ವರ ವನ್ಯ ಜೀವಿ ವಿಭಾಗದ ಅರಣ್ಯಕ್ಕೆ ಬಿಡಲಾಗಿದೆ. ಆರ್ಎಫ್ಓ ಸುರೇಂದ್ರ, ಡಿಆರ್ಎಫ್ಓ ವಿಜಯಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಈ ತಿಂಗಳಲ್ಲಿ ಮೈಸೂರು ತಾಲ್ಲೂಕಿನಲ್ಲಿ ಸೆರೆ ಸಿಕ್ಕಿದ ಏಳನೇ ಚಿರತೆ ಇದಾಗಿದೆ. ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 16 ರಂದು ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಇದಾದ ಮರುದಿನವೇ ಮಾರಶೆಟ್ಟಿ ಗ್ರಾಮದಲ್ಲಿ ಜಾನುವಾರು ಬೇಟೆಯಾಡುತ್ತಿದ್ದ ಮೂರು ವರ್ಷ ಪ್ರಾಯದ ಹೆಣ್ಣು ಚಿರತೆ ಕೊನೆಗೂ ಬೋನಿಗೆ ಬಿದ್ದಿತ್ತು.
ಡಿಸೆಂಬರ್ 22ರಂದು ತಿ.ನರಸೀಪುರ ಗ್ರಾಮದ ಮತ್ತತ್ತಿ ಗ್ರಾಮದಲ್ಲಿ ಕೋಳಿ ತಿನ್ನಲು ಬಂದ ಎರಡೂವರೆ ವರ್ಷದ ಚಿರತೆ ಸೆರೆಯಾಗಿತ್ತು.
ಡಿಸೆಂಬರ್ 23ರಂದು ತಿ.ನರಸೀಪುರ ತಾಲ್ಲೂಕಿನಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಎಂಟು ವರ್ಷಗಳ ಗಂಡು ಚಿರತೆ ಎಂ.ಎಲ್.ಹುಂಡಿ ಗ್ರಾಮದ ಮಲ್ಲಪ್ಪನ ಬೆಟ್ಟದಲ್ಲಿ ಸೆರೆ ಸಿಕ್ಕಿತ್ತು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…