ಬೆಂಗಳೂರು : ಅದು 1983 ಜೂನ್ 25, ಸೋಲೇ ಇಲ್ಲದೆ ಬೀಗುತ್ತಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಭಾರತ ಸೋಲುಣಿಸಿ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನ. ಭಾರತ ಕ್ರಿಕೆಟ್ ಇತಿಹಾಸ ಈ ದಿನವನ್ನು ಮರೆಯಲಾಗದ ಅಪೂರ್ವ ಕ್ಷಣ. ಇಂತಹ ವಿಶೇಷ ದಿನಕ್ಕೆ 40 ವರ್ಷ ಸಂದರೂ ಭಾರತೀಯರು ನೆನಪಿಸಿಕೊಂಡು ಕಾಲರ್ ಟೈಟ್ ಮಾಡಿಕೊಳ್ತಾರೆ. ಅಂತಹ ಹೆಮ್ಮೆಯ ದಿನವನ್ನು ಮತ್ತಷ್ಟು ವಿಶೇಷವಾಗಿಸಲು ಅಂಚೆ ಇಲಾಖೆ ನಿರ್ಧರಿಸಿದೆ.
ಭಾರತ ಕ್ರಿಕೆಟ್ ವಿಶ್ವಕಪ್ ಗೆದ್ದು 40 ವರ್ಷದ ಸಂಭ್ರಮದಲ್ಲಿರುವ ಈ ದಿನವನ್ನು ಮತ್ತಷ್ಟು ವಿಶೇಷವಾಗಿಸುವ ನಿಟ್ಟಿನಲ್ಲಿ ಭಾರತೀಯ ಅಂಚೆ ಇಲಾಖೆ ವಿಶೇಷ ಅಂಚೆ ಕಾರ್ಡ್ ಬಿಡುಗಡೆಗೊಳಿಸಿದೆ.
ಜೂನ್ ,25 ಭಾನುವಾರವಾದ್ದರಿಂದ ಅಂಚೆ ಕಚೇರಿಗಳು ಬಂದ್ ಆಗಿದ್ದವು. ಈ ಹಿನ್ನಲೆಯಲ್ಲಿ ಜೂನ್ 26ರ ಸೋಮವಾರದಂದು ಈ ವಿಶೇಷ ಕಾರ್ಡ್ ಅನ್ನು ಬಿಡುಗಡೆಗೊಳಿಸಲಾಗಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಪಿಲ್ ನೇತೃತ್ವದ ಟೀಂ ಇಂಡಿಯಾ ಏಕದಿನ ವಿಶ್ವಕಪ್ ಗೆದ್ದಿತ್ತು. 1983ರಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಘಟಾನುಘಟಿ ತಂಡಗಳಿಗೆ ಮಣ್ಣು ಮುಕ್ಕಿಸಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿತ್ತು.
ಸತತ ಎರಡು ಏಕದಿನ ವಿಶ್ವಕಪ್ ಗೆದ್ದು ಫೈನಲ್ ಪ್ರವೇಶಿಸಿದ್ದ ವೆಸ್ಟ್ ಇಂಡೀಸ್ ತಂಡವನ್ನು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ 43 ರನ್ ಅಂತರದಲ್ಲಿ ಬಗ್ಗು ಬಡಿಯುವಲ್ಲಿ ಭಾರತ ಯಶಸ್ವಿಯಾಯಿತು.
ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಕಪಿಲ್ ದೇವ್ ಏಕದಿನ ವಿಶ್ವಕಪ್ ಎತ್ತಿ ಹಿಡಿದದ್ದು ದೇಶದ ಲಕ್ಷಾಂತರ ಮಂದಿ ಕ್ರಿಕೆಟ್ನತ್ತ ಒಲವು ಬೆಳಸಿಕೊಳ್ಳಲು ಸ್ಪೂರ್ತಿ ನೀಡಿತು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…