BREAKING NEWS

ಭಾರತ ವಿಶ್ವಕಪ್ ಗೆದ್ದ 40 ವರ್ಷದ ಸಂಭ್ರಮಕ್ಕೆ ಅಂಚೆ ಇಲಾಖೆಯಿಂದ ವಿಶೇಷ ಅಂಚೆ ಕಾರ್ಡ್ ಬಿಡುಗಡೆ

ಬೆಂಗಳೂರು : ಅದು 1983 ಜೂನ್ 25, ಸೋಲೇ ಇಲ್ಲದೆ ಬೀಗುತ್ತಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಭಾರತ ಸೋಲುಣಿಸಿ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನ. ಭಾರತ ಕ್ರಿಕೆಟ್ ಇತಿಹಾಸ ಈ ದಿನವನ್ನು ಮರೆಯಲಾಗದ ಅಪೂರ್ವ ಕ್ಷಣ. ಇಂತಹ ವಿಶೇಷ ದಿನಕ್ಕೆ 40 ವರ್ಷ ಸಂದರೂ ಭಾರತೀಯರು ನೆನಪಿಸಿಕೊಂಡು ಕಾಲರ್ ಟೈಟ್ ಮಾಡಿಕೊಳ್ತಾರೆ. ಅಂತಹ ಹೆಮ್ಮೆಯ ದಿನವನ್ನು ಮತ್ತಷ್ಟು ವಿಶೇಷವಾಗಿಸಲು ಅಂಚೆ ಇಲಾಖೆ ನಿರ್ಧರಿಸಿದೆ.

ಭಾರತ ಕ್ರಿಕೆಟ್ ವಿಶ್ವಕಪ್ ಗೆದ್ದು 40 ವರ್ಷದ ಸಂಭ್ರಮದಲ್ಲಿರುವ ಈ ದಿನವನ್ನು ಮತ್ತಷ್ಟು ವಿಶೇಷವಾಗಿಸುವ ನಿಟ್ಟಿನಲ್ಲಿ ಭಾರತೀಯ ಅಂಚೆ ಇಲಾಖೆ ವಿಶೇಷ ಅಂಚೆ ಕಾರ್ಡ್ ಬಿಡುಗಡೆಗೊಳಿಸಿದೆ.
ಜೂನ್ ,25 ಭಾನುವಾರವಾದ್ದರಿಂದ ಅಂಚೆ ಕಚೇರಿಗಳು ಬಂದ್ ಆಗಿದ್ದವು. ಈ ಹಿನ್ನಲೆಯಲ್ಲಿ ಜೂನ್ 26ರ ಸೋಮವಾರದಂದು ಈ ವಿಶೇಷ ಕಾರ್ಡ್ ಅನ್ನು ಬಿಡುಗಡೆಗೊಳಿಸಲಾಗಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಪಿಲ್ ನೇತೃತ್ವದ ಟೀಂ ಇಂಡಿಯಾ ಏಕದಿನ ವಿಶ್ವಕಪ್ ಗೆದ್ದಿತ್ತು. 1983ರಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಘಟಾನುಘಟಿ ತಂಡಗಳಿಗೆ ಮಣ್ಣು ಮುಕ್ಕಿಸಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿತ್ತು.

ಸತತ ಎರಡು ಏಕದಿನ ವಿಶ್ವಕಪ್ ಗೆದ್ದು ಫೈನಲ್ ಪ್ರವೇಶಿಸಿದ್ದ ವೆಸ್ಟ್ ಇಂಡೀಸ್‌ ತಂಡವನ್ನು ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ 43 ರನ್ ಅಂತರದಲ್ಲಿ ಬಗ್ಗು ಬಡಿಯುವಲ್ಲಿ ಭಾರತ ಯಶಸ್ವಿಯಾಯಿತು.
ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಕಪಿಲ್ ದೇವ್ ಏಕದಿನ ವಿಶ್ವಕಪ್ ಎತ್ತಿ ಹಿಡಿದದ್ದು ದೇಶದ ಲಕ್ಷಾಂತರ ಮಂದಿ ಕ್ರಿಕೆಟ್‌ನತ್ತ ಒಲವು ಬೆಳಸಿಕೊಳ್ಳಲು ಸ್ಪೂರ್ತಿ ನೀಡಿತು.

lokesh

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

45 mins ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

3 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

5 hours ago