BREAKING NEWS

ಸಿದ್ದಗಂಗಾ ಮಠದ ಉತ್ತರಾಧಿಕಾರಿಗೆ ಇಂದು ಪಟ್ಟಾಭಿಷೇಕ

ತುಮಕೂರು : ನಾಡಿನ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ, ದೇಶಕ್ಕೆ ತ್ರಿವಿಧ ದಾಸೋಹ ನೀಡುತ್ತಿರುವ ಪ್ರಸಿದ್ಧ ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯುತ್ತಿದೆ. ಶ್ರೀ ಮಠದ ಉತ್ತರಾಧಿಕಾರಿ ಮನೋಜ್ ಕುಮಾರ್ ಅವರ ಪಟ್ಟಾಭಿಷೇಕವನ್ನು ಸಿದ್ದಗಂಗಾ ಹಳೆಯ ಮಠದ ಆವರಣದಲ್ಲಿ ನಡೆಸಲಾಗುತ್ತಿದ್ದು, ಕೆಲವರಿಗೆ ಮಾತ್ರ ಆಹ್ವಾನವಿದೆ. ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗುತ್ತವೆ.

ಜಗಜ್ಯೋತಿ ಬಸವೇಶ್ವರರ ಜಯಂತಿ ದಿನದಂದು ಶ್ರೀಮಠಕ್ಕೆ ನೇಮಿಸಲಾಗಿರುವ ಉತ್ತರಾಧಿಕಾರಿ ಮನೋಜ ಕುಮಾರ್​ ಅವರ ಪಟ್ಟಾಭಿಷೇಕ ಸಮಾರಂಭ ಸರಳವಾಗಿ ನಡೆಯಲಿದೆ. ಇದೇ ವೇಳೆ, ಶಾಖಾ ಮಠವಾದ ಬಂಡೇಮಠಕ್ಕೆ ಹರ್ಷ ಕೆ.ಎಂ, ಬೆಂಗಳೂರು ಗ್ರಾಮಂರದ ವಿಜಯಪುರದ ಬಸವಕಲ್ಯಾಣ ಮಠಕ್ಕೆ ಗೌರೀಶ್​ ಕುಮಾರ್​ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದ್ದು, ಮೂವರಿಗೂ ಇಂದು ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.

ಬೆಳಗ್ಗೆ 5 ಗಂಟೆಯಿಂದ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿ 6:30ಕ್ಕೆ ದೀಕ್ಷಾ ಸಂಸ್ಕಾರ ಮುಗಿಯುತ್ತದೆ. ನಂತರ ಬೆಳಿಗ್ಗೆ 7:30ಕ್ಕೆ ಪಟ್ಟಾಭಿಷೇಕ ಸರಳವಾಗಿ ಆರಂಭವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಹಾಗೂ ಬೇಲಿ ಮಠದ ಶಿವಾನುಭವ ಚರಮೂರ್ತಿ ಶಿವಮೂರ್ತಿ ಮಹಾಸ್ವಾಮಿಗಳು ಸೇರಿ ಅನೇಕ ಮಠಾಧೀಶರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಸಾರ್ವಜನಿಕರು ಹಾಗೂ ಹಿತೈಷಿಗಳು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸರಳವಾಗಿ ಈ ಸಮಾರಂಭ ಆಯೋಜನೆ ಮಾಡಲಾಗುತ್ತಿದ್ದು, ಮಠದ ಭಕ್ತಾದಿಗಳು ಸಹಕಾರ ನೀಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಮನವಿ ಮಾಡಿದೆ.

ನಮ್ಮ ದೇಶದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಭಾರಿ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತದೆ. ದೇಶದ ಹಲವು ಧಾರ್ಮಿಕ ಮಠಗಳು, ಮಂದಿರಗಳು ಹಾಗೂ ಸಂಸ್ಥೆಗಳು ಕೂಡ ತಮ್ಮ ಸೇವೆಯನ್ನು ನಿರಂತರವಾಗಿ ಸಲ್ಲಿಸುತ್ತಾ ಬಂದಿವೆ. ಹೀಗೆ ಸ್ವಾತಂತ್ರ್ಯದ ಪೂರ್ವದಿಂದಲೂ ಊಟ, ವಸತಿ ಹಾಗೂ ಶಿಕ್ಷಣ ಸೇರಿ ತ್ರಿವಿಧ ದಾಸೋಹ ನೆರವೇರಿಸುತ್ತಾ ಬಂದಿರುವ ತುಮಕೂರಿನ ಸಿದ್ದಗಂಗಾ ಮಠ ದೇಶದಲ್ಲಿಯೇ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗ ಸುಮಾರು 10 ಸಾವಿರ ವಿದ್ಯಾರ್ಥಿಗಳು ಮಠದಲ್ಲಿ ಅಭ್ಯಾಸ ಮಾಡತ್ತಿದ್ದಾರೆ.

 

lokesh

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

2 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago