BREAKING NEWS

ಸಿದ್ದಗಂಗಾ ಮಠದ ಉತ್ತರಾಧಿಕಾರಿಗೆ ಇಂದು ಪಟ್ಟಾಭಿಷೇಕ

ತುಮಕೂರು : ನಾಡಿನ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ, ದೇಶಕ್ಕೆ ತ್ರಿವಿಧ ದಾಸೋಹ ನೀಡುತ್ತಿರುವ ಪ್ರಸಿದ್ಧ ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯುತ್ತಿದೆ. ಶ್ರೀ ಮಠದ ಉತ್ತರಾಧಿಕಾರಿ ಮನೋಜ್ ಕುಮಾರ್ ಅವರ ಪಟ್ಟಾಭಿಷೇಕವನ್ನು ಸಿದ್ದಗಂಗಾ ಹಳೆಯ ಮಠದ ಆವರಣದಲ್ಲಿ ನಡೆಸಲಾಗುತ್ತಿದ್ದು, ಕೆಲವರಿಗೆ ಮಾತ್ರ ಆಹ್ವಾನವಿದೆ. ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗುತ್ತವೆ.

ಜಗಜ್ಯೋತಿ ಬಸವೇಶ್ವರರ ಜಯಂತಿ ದಿನದಂದು ಶ್ರೀಮಠಕ್ಕೆ ನೇಮಿಸಲಾಗಿರುವ ಉತ್ತರಾಧಿಕಾರಿ ಮನೋಜ ಕುಮಾರ್​ ಅವರ ಪಟ್ಟಾಭಿಷೇಕ ಸಮಾರಂಭ ಸರಳವಾಗಿ ನಡೆಯಲಿದೆ. ಇದೇ ವೇಳೆ, ಶಾಖಾ ಮಠವಾದ ಬಂಡೇಮಠಕ್ಕೆ ಹರ್ಷ ಕೆ.ಎಂ, ಬೆಂಗಳೂರು ಗ್ರಾಮಂರದ ವಿಜಯಪುರದ ಬಸವಕಲ್ಯಾಣ ಮಠಕ್ಕೆ ಗೌರೀಶ್​ ಕುಮಾರ್​ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದ್ದು, ಮೂವರಿಗೂ ಇಂದು ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.

ಬೆಳಗ್ಗೆ 5 ಗಂಟೆಯಿಂದ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿ 6:30ಕ್ಕೆ ದೀಕ್ಷಾ ಸಂಸ್ಕಾರ ಮುಗಿಯುತ್ತದೆ. ನಂತರ ಬೆಳಿಗ್ಗೆ 7:30ಕ್ಕೆ ಪಟ್ಟಾಭಿಷೇಕ ಸರಳವಾಗಿ ಆರಂಭವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಹಾಗೂ ಬೇಲಿ ಮಠದ ಶಿವಾನುಭವ ಚರಮೂರ್ತಿ ಶಿವಮೂರ್ತಿ ಮಹಾಸ್ವಾಮಿಗಳು ಸೇರಿ ಅನೇಕ ಮಠಾಧೀಶರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಸಾರ್ವಜನಿಕರು ಹಾಗೂ ಹಿತೈಷಿಗಳು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸರಳವಾಗಿ ಈ ಸಮಾರಂಭ ಆಯೋಜನೆ ಮಾಡಲಾಗುತ್ತಿದ್ದು, ಮಠದ ಭಕ್ತಾದಿಗಳು ಸಹಕಾರ ನೀಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಮನವಿ ಮಾಡಿದೆ.

ನಮ್ಮ ದೇಶದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಭಾರಿ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತದೆ. ದೇಶದ ಹಲವು ಧಾರ್ಮಿಕ ಮಠಗಳು, ಮಂದಿರಗಳು ಹಾಗೂ ಸಂಸ್ಥೆಗಳು ಕೂಡ ತಮ್ಮ ಸೇವೆಯನ್ನು ನಿರಂತರವಾಗಿ ಸಲ್ಲಿಸುತ್ತಾ ಬಂದಿವೆ. ಹೀಗೆ ಸ್ವಾತಂತ್ರ್ಯದ ಪೂರ್ವದಿಂದಲೂ ಊಟ, ವಸತಿ ಹಾಗೂ ಶಿಕ್ಷಣ ಸೇರಿ ತ್ರಿವಿಧ ದಾಸೋಹ ನೆರವೇರಿಸುತ್ತಾ ಬಂದಿರುವ ತುಮಕೂರಿನ ಸಿದ್ದಗಂಗಾ ಮಠ ದೇಶದಲ್ಲಿಯೇ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗ ಸುಮಾರು 10 ಸಾವಿರ ವಿದ್ಯಾರ್ಥಿಗಳು ಮಠದಲ್ಲಿ ಅಭ್ಯಾಸ ಮಾಡತ್ತಿದ್ದಾರೆ.

 

lokesh

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

9 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

9 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

9 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

9 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

9 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

10 hours ago