BREAKING NEWS

ಸಿದ್ದಗಂಗಾ ಮಠದ ಉತ್ತರಾಧಿಕಾರಿಗೆ ಇಂದು ಪಟ್ಟಾಭಿಷೇಕ

ತುಮಕೂರು : ನಾಡಿನ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ, ದೇಶಕ್ಕೆ ತ್ರಿವಿಧ ದಾಸೋಹ ನೀಡುತ್ತಿರುವ ಪ್ರಸಿದ್ಧ ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯುತ್ತಿದೆ. ಶ್ರೀ ಮಠದ ಉತ್ತರಾಧಿಕಾರಿ ಮನೋಜ್ ಕುಮಾರ್ ಅವರ ಪಟ್ಟಾಭಿಷೇಕವನ್ನು ಸಿದ್ದಗಂಗಾ ಹಳೆಯ ಮಠದ ಆವರಣದಲ್ಲಿ ನಡೆಸಲಾಗುತ್ತಿದ್ದು, ಕೆಲವರಿಗೆ ಮಾತ್ರ ಆಹ್ವಾನವಿದೆ. ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗುತ್ತವೆ.

ಜಗಜ್ಯೋತಿ ಬಸವೇಶ್ವರರ ಜಯಂತಿ ದಿನದಂದು ಶ್ರೀಮಠಕ್ಕೆ ನೇಮಿಸಲಾಗಿರುವ ಉತ್ತರಾಧಿಕಾರಿ ಮನೋಜ ಕುಮಾರ್​ ಅವರ ಪಟ್ಟಾಭಿಷೇಕ ಸಮಾರಂಭ ಸರಳವಾಗಿ ನಡೆಯಲಿದೆ. ಇದೇ ವೇಳೆ, ಶಾಖಾ ಮಠವಾದ ಬಂಡೇಮಠಕ್ಕೆ ಹರ್ಷ ಕೆ.ಎಂ, ಬೆಂಗಳೂರು ಗ್ರಾಮಂರದ ವಿಜಯಪುರದ ಬಸವಕಲ್ಯಾಣ ಮಠಕ್ಕೆ ಗೌರೀಶ್​ ಕುಮಾರ್​ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದ್ದು, ಮೂವರಿಗೂ ಇಂದು ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.

ಬೆಳಗ್ಗೆ 5 ಗಂಟೆಯಿಂದ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿ 6:30ಕ್ಕೆ ದೀಕ್ಷಾ ಸಂಸ್ಕಾರ ಮುಗಿಯುತ್ತದೆ. ನಂತರ ಬೆಳಿಗ್ಗೆ 7:30ಕ್ಕೆ ಪಟ್ಟಾಭಿಷೇಕ ಸರಳವಾಗಿ ಆರಂಭವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಹಾಗೂ ಬೇಲಿ ಮಠದ ಶಿವಾನುಭವ ಚರಮೂರ್ತಿ ಶಿವಮೂರ್ತಿ ಮಹಾಸ್ವಾಮಿಗಳು ಸೇರಿ ಅನೇಕ ಮಠಾಧೀಶರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಸಾರ್ವಜನಿಕರು ಹಾಗೂ ಹಿತೈಷಿಗಳು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸರಳವಾಗಿ ಈ ಸಮಾರಂಭ ಆಯೋಜನೆ ಮಾಡಲಾಗುತ್ತಿದ್ದು, ಮಠದ ಭಕ್ತಾದಿಗಳು ಸಹಕಾರ ನೀಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಮನವಿ ಮಾಡಿದೆ.

ನಮ್ಮ ದೇಶದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಭಾರಿ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತದೆ. ದೇಶದ ಹಲವು ಧಾರ್ಮಿಕ ಮಠಗಳು, ಮಂದಿರಗಳು ಹಾಗೂ ಸಂಸ್ಥೆಗಳು ಕೂಡ ತಮ್ಮ ಸೇವೆಯನ್ನು ನಿರಂತರವಾಗಿ ಸಲ್ಲಿಸುತ್ತಾ ಬಂದಿವೆ. ಹೀಗೆ ಸ್ವಾತಂತ್ರ್ಯದ ಪೂರ್ವದಿಂದಲೂ ಊಟ, ವಸತಿ ಹಾಗೂ ಶಿಕ್ಷಣ ಸೇರಿ ತ್ರಿವಿಧ ದಾಸೋಹ ನೆರವೇರಿಸುತ್ತಾ ಬಂದಿರುವ ತುಮಕೂರಿನ ಸಿದ್ದಗಂಗಾ ಮಠ ದೇಶದಲ್ಲಿಯೇ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗ ಸುಮಾರು 10 ಸಾವಿರ ವಿದ್ಯಾರ್ಥಿಗಳು ಮಠದಲ್ಲಿ ಅಭ್ಯಾಸ ಮಾಡತ್ತಿದ್ದಾರೆ.

 

lokesh

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

5 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

5 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

8 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

8 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

8 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

8 hours ago