ತುಮಕೂರು : ನಾಡಿನ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ, ದೇಶಕ್ಕೆ ತ್ರಿವಿಧ ದಾಸೋಹ ನೀಡುತ್ತಿರುವ ಪ್ರಸಿದ್ಧ ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯುತ್ತಿದೆ. ಶ್ರೀ ಮಠದ ಉತ್ತರಾಧಿಕಾರಿ ಮನೋಜ್ ಕುಮಾರ್ ಅವರ ಪಟ್ಟಾಭಿಷೇಕವನ್ನು ಸಿದ್ದಗಂಗಾ ಹಳೆಯ ಮಠದ ಆವರಣದಲ್ಲಿ ನಡೆಸಲಾಗುತ್ತಿದ್ದು, ಕೆಲವರಿಗೆ ಮಾತ್ರ ಆಹ್ವಾನವಿದೆ. ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗುತ್ತವೆ.
ಜಗಜ್ಯೋತಿ ಬಸವೇಶ್ವರರ ಜಯಂತಿ ದಿನದಂದು ಶ್ರೀಮಠಕ್ಕೆ ನೇಮಿಸಲಾಗಿರುವ ಉತ್ತರಾಧಿಕಾರಿ ಮನೋಜ ಕುಮಾರ್ ಅವರ ಪಟ್ಟಾಭಿಷೇಕ ಸಮಾರಂಭ ಸರಳವಾಗಿ ನಡೆಯಲಿದೆ. ಇದೇ ವೇಳೆ, ಶಾಖಾ ಮಠವಾದ ಬಂಡೇಮಠಕ್ಕೆ ಹರ್ಷ ಕೆ.ಎಂ, ಬೆಂಗಳೂರು ಗ್ರಾಮಂರದ ವಿಜಯಪುರದ ಬಸವಕಲ್ಯಾಣ ಮಠಕ್ಕೆ ಗೌರೀಶ್ ಕುಮಾರ್ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದ್ದು, ಮೂವರಿಗೂ ಇಂದು ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಬೆಳಗ್ಗೆ 5 ಗಂಟೆಯಿಂದ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿ 6:30ಕ್ಕೆ ದೀಕ್ಷಾ ಸಂಸ್ಕಾರ ಮುಗಿಯುತ್ತದೆ. ನಂತರ ಬೆಳಿಗ್ಗೆ 7:30ಕ್ಕೆ ಪಟ್ಟಾಭಿಷೇಕ ಸರಳವಾಗಿ ಆರಂಭವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಹಾಗೂ ಬೇಲಿ ಮಠದ ಶಿವಾನುಭವ ಚರಮೂರ್ತಿ ಶಿವಮೂರ್ತಿ ಮಹಾಸ್ವಾಮಿಗಳು ಸೇರಿ ಅನೇಕ ಮಠಾಧೀಶರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಸಾರ್ವಜನಿಕರು ಹಾಗೂ ಹಿತೈಷಿಗಳು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸರಳವಾಗಿ ಈ ಸಮಾರಂಭ ಆಯೋಜನೆ ಮಾಡಲಾಗುತ್ತಿದ್ದು, ಮಠದ ಭಕ್ತಾದಿಗಳು ಸಹಕಾರ ನೀಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಮನವಿ ಮಾಡಿದೆ.
ನಮ್ಮ ದೇಶದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಭಾರಿ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತದೆ. ದೇಶದ ಹಲವು ಧಾರ್ಮಿಕ ಮಠಗಳು, ಮಂದಿರಗಳು ಹಾಗೂ ಸಂಸ್ಥೆಗಳು ಕೂಡ ತಮ್ಮ ಸೇವೆಯನ್ನು ನಿರಂತರವಾಗಿ ಸಲ್ಲಿಸುತ್ತಾ ಬಂದಿವೆ. ಹೀಗೆ ಸ್ವಾತಂತ್ರ್ಯದ ಪೂರ್ವದಿಂದಲೂ ಊಟ, ವಸತಿ ಹಾಗೂ ಶಿಕ್ಷಣ ಸೇರಿ ತ್ರಿವಿಧ ದಾಸೋಹ ನೆರವೇರಿಸುತ್ತಾ ಬಂದಿರುವ ತುಮಕೂರಿನ ಸಿದ್ದಗಂಗಾ ಮಠ ದೇಶದಲ್ಲಿಯೇ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗ ಸುಮಾರು 10 ಸಾವಿರ ವಿದ್ಯಾರ್ಥಿಗಳು ಮಠದಲ್ಲಿ ಅಭ್ಯಾಸ ಮಾಡತ್ತಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…