BREAKING NEWS

ಇಂದು ವರ್ಷದ ಕೊನೆಯ ಚಂದ್ರಗ್ರಹಣ : ಹಲವು ದೇಗುಲಗಳು ಬಂದ್

ಬೆಂಗಳೂರು : ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ಸಂಭವಿಸಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಮಧ್ಯರಾತ್ರಿ 1:5 ಗಂಟೆಗೆ ಚಂದ್ರಗ್ರಹಣ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಒಟ್ಟಾರೆ ಗ್ರಹಣದ ಅವಧಿ 1 ತಾಸು 19 ನಿಮಿಷ ಆಗಿದೆ.

ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸಂಜೆಯ ಮಹಾಪೂಜೆಯ ಸಮಯ ಬದಲಾಗಿದ್ದು, ದೇವಾಲಯವನ್ನು ಕೆಲವೆಡೆ ಬೇಗನೆ ಬಂದ್‌ ಮಾಡಿದರೆ, ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದು ವರ್ಷದ ಕೊನೆಯ ಗ್ರಹಣವಾಗಿದ್ದು, ಇದಾದ ಬಳಿಕ ದೇಶದಲ್ಲಿ 2025ರ ಸೆ.7ರಂದು ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಕಳೆದ ಬಾರಿ ನ.8, 2022ರಂದು ಚಂದ್ರಗ್ರಹಣ ಸಂಭವಿಸಿತ್ತು. ಇಡೀ ದೇಶದಲ್ಲಿ ಚಂದ್ರಗ್ರಹಣ ಕಾಣಲಿದ್ದು, ಇದರ ಜೊತೆಗೆ ಏಷ್ಯಾ ಖಂಡ ಸೇರಿ ಎಲ್ಲ ಕಡೆಗಳಲ್ಲಿಯೂ ವೀಕ್ಷಿಸಬಹುದಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಚಂದ್ರಗ್ರಹಣ ಇರುವುದರಿಂದ ತಿರುಪತಿ ತಿಮ್ಮಪ್ಪನ ದರ್ಶನವನ್ನು 8 ಗಂಟೆಗಳ ಕಾಲ ರದ್ದು ಮಾಡಲಾಗಿದೆ. ಈ ಸಮಯದಲ್ಲಿ ದೇವಾಲಯಗಳನ್ನು ಮುಚ್ಚಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಘೋಷಿಸಿದೆ. ಗ್ರಹಣದ ಬಳಿಕ ದೇವಸ್ಥಾನವನ್ನು ಸ್ವಚ್ಚಗೊಳಿಸಲಾಗುತ್ತದೆ. ನಂತರ ಭಕ್ತರು ದೇವರ ದರ್ಶನ ಮಾಡಬಹುದಾಗಿದೆ. ನಿತ್ಯ ಲಕ್ಷಾಂತರ ಭಕ್ತರು ದೂರದೂರುಗಳಿಂದ ತಿರುಪತಿಗೆ ಭೇಟಿ ನೀಡುತ್ತಾರೆ. ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಾರೆ. ಆದರೆ ಚಂದ್ರ ಗ್ರಹಣದ ಈ ಸಮಯದಲ್ಲಿ ದೇವಸ್ಥಾನವನ್ನು ಮುಚ್ಚಲಾಗುತ್ತದೆ. ಹೀಗಾಗಿ ಭಕ್ತರು ಈ ಸಮಯದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವುದನ್ನು ತಪ್ಪಿಸಬೇಕು ಎಂದು ಸೂಚನೆ ನೀಡಲಾಗಿದೆ. ಅಕ್ಟೋಬರ್ 28ರ ಸಂಜೆ 7ರಿಂದ ಅಕ್ಟೋಬರ್ 29 ಬೆಳಗಿನ ಜಾವ 3.15ರವರೆಗೆ ದೇವಸ್ಥಾನದಲ್ಲಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ.

ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನವನ್ನು ಸಂಜೆ 6ಕ್ಕೆ ಬಂದ್ ಮಾಡಲಾಗುವುದು. ಅ.29 ರಂದು ಬೆಳಗ್ಗೆ 7.30ರ ನಂತರ ಭಕ್ತಾದಿಗಳ ದರ್ಶನಕ್ಕೆ ತೆರೆಯಲು ನಿರ್ಧರಿಸಲಾಗಿದೆ. ಹುಬ್ಬಳಿಯ ವಿವಿಧ ದೇವಾಲಯಗಳಲ್ಲಿ ಗ್ರಹಣ ಸಂದರ್ಭದಲ್ಲಿ ಅಭಿಷೇಕ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ರಾತ್ರಿ ಗ್ರಹಣ ಅವಧಿಯಲ್ಲಿ ದೇವಾಲಯಗಳಲ್ಲಿ ವಿಶೇಷ ಅಭಿಷೇಕ ನಡೆಯಲಿದೆ. ಇನ್ನು, ಗ್ರಹಣ ನಿಮಿತ್ತ ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ಸಂಜೆ 4ರಿಂದ 5.30ರ ತನಕ ಮಾತ್ರ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಅವಕಾಶ ಇದೆ.

ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಅಕ್ಟೋಬರ್​ 28ರಂದು ಶನಿವಾರ ಕರಾವಳಿ ದೇವಾಲಯಗಳ ದೇವರ ದರ್ಶನಗಳಲ್ಲಿ ವ್ಯತ್ಯಯ ಆಗಲಿದೆ. ಕುಕ್ಕೆ ದೇವಾಲಯದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ. 28ರಂದು ಶನಿವಾರ ರಾತ್ರಿಯ ಮಹಾಪೂಜೆ ಸಾಯಂಕಾಲ 6.30ಕ್ಕೆ ಮುಕ್ತಾಯಗೊಳ್ಳಲಿದೆ. ಆ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಈ ದಿನ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ ಪ್ರಸಾದ ಭೋಜನದ ಪ್ರಸಾದ ವಿತರಣೆ ಇರುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

lokesh

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

1 hour ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

2 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

2 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

2 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

2 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

3 hours ago