ಪಣಜಿ: ದೂದ್ ಸಾಗರ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಇಂದು ಬಂದ ಪ್ರವಾಸಿಗರಿಗೆ ಸಂಕಷ್ಟ ಎದುರಾಗಿತ್ತು.
ಗೋವಾ ಸರ್ಕಾರ ದೂದ್ ಸಾಗರ್ ಜಲಪಾತ ವೀಕ್ಷಣೆ ಹಾಗೂ ಆ ಪ್ರದೇಶದಲ್ಲಿ ಟ್ರೆಕಿಂಗ್ ಗೆ ನಿಷೇಧ ಹೇರಿ ಇಂದು ಆದೇಶ ಹೊರಡಿಸಿದೆ. ಇದು ತಿಳಿಯದೆ ಕರ್ನಾಟಕದ ಸಾವಿರಾರು ಯುವಕರು ಅಲ್ಲಿಗೆ ತೆರಳಿದ್ದರು. ಆದರೆ ಮಧ್ಯದಲ್ಲೇ ಅವರನ್ನು ತಡೆದ ಪೊಲೀಸರು ಬಸ್ಕಿ ಹೊಡೆಸಿ ವಾಪಸ್ ಕಳಿಸಿದ್ದಾರೆ.
ನಿಯಮ ಉಲ್ಲಂಘಿಸಿ ಚಾರಣಕ್ಕೆ ತೆರಳಿದ ಪ್ರವಾಸಿಗರ ಗುಂಪುಗಳನ್ನು ರೈಲ್ವೆ ರಕ್ಷಣಾ ದಳದ ಪೊಲೀಸರು ಶಿಕ್ಷೆಯಾಗಿ ಬಸ್ಕಿ ಹೊಡೆಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಮಳೆಗಾಲದಲ್ಲಿ ದೂದ್ ಸಾಗರ್ ಮೈದುಂಬಿ ಹರಿಯುತ್ತದೆ. ಹೀಗಾಗಿ ಅದನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಈ ಬಾರಿ ಗೋವಾ ಸರ್ಕಾರದ ನಿರ್ಧಾರದಿಂದ ಪ್ರವಾಸಿಗರಿಗೆ ನಿರಾಶೆ ಮೂಡಿದೆ.
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…