ಪಣಜಿ: ದೂದ್ ಸಾಗರ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಇಂದು ಬಂದ ಪ್ರವಾಸಿಗರಿಗೆ ಸಂಕಷ್ಟ ಎದುರಾಗಿತ್ತು.
ಗೋವಾ ಸರ್ಕಾರ ದೂದ್ ಸಾಗರ್ ಜಲಪಾತ ವೀಕ್ಷಣೆ ಹಾಗೂ ಆ ಪ್ರದೇಶದಲ್ಲಿ ಟ್ರೆಕಿಂಗ್ ಗೆ ನಿಷೇಧ ಹೇರಿ ಇಂದು ಆದೇಶ ಹೊರಡಿಸಿದೆ. ಇದು ತಿಳಿಯದೆ ಕರ್ನಾಟಕದ ಸಾವಿರಾರು ಯುವಕರು ಅಲ್ಲಿಗೆ ತೆರಳಿದ್ದರು. ಆದರೆ ಮಧ್ಯದಲ್ಲೇ ಅವರನ್ನು ತಡೆದ ಪೊಲೀಸರು ಬಸ್ಕಿ ಹೊಡೆಸಿ ವಾಪಸ್ ಕಳಿಸಿದ್ದಾರೆ.
ನಿಯಮ ಉಲ್ಲಂಘಿಸಿ ಚಾರಣಕ್ಕೆ ತೆರಳಿದ ಪ್ರವಾಸಿಗರ ಗುಂಪುಗಳನ್ನು ರೈಲ್ವೆ ರಕ್ಷಣಾ ದಳದ ಪೊಲೀಸರು ಶಿಕ್ಷೆಯಾಗಿ ಬಸ್ಕಿ ಹೊಡೆಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಮಳೆಗಾಲದಲ್ಲಿ ದೂದ್ ಸಾಗರ್ ಮೈದುಂಬಿ ಹರಿಯುತ್ತದೆ. ಹೀಗಾಗಿ ಅದನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಈ ಬಾರಿ ಗೋವಾ ಸರ್ಕಾರದ ನಿರ್ಧಾರದಿಂದ ಪ್ರವಾಸಿಗರಿಗೆ ನಿರಾಶೆ ಮೂಡಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…