ಪಣಜಿ: ದೂದ್ ಸಾಗರ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಇಂದು ಬಂದ ಪ್ರವಾಸಿಗರಿಗೆ ಸಂಕಷ್ಟ ಎದುರಾಗಿತ್ತು.
ಗೋವಾ ಸರ್ಕಾರ ದೂದ್ ಸಾಗರ್ ಜಲಪಾತ ವೀಕ್ಷಣೆ ಹಾಗೂ ಆ ಪ್ರದೇಶದಲ್ಲಿ ಟ್ರೆಕಿಂಗ್ ಗೆ ನಿಷೇಧ ಹೇರಿ ಇಂದು ಆದೇಶ ಹೊರಡಿಸಿದೆ. ಇದು ತಿಳಿಯದೆ ಕರ್ನಾಟಕದ ಸಾವಿರಾರು ಯುವಕರು ಅಲ್ಲಿಗೆ ತೆರಳಿದ್ದರು. ಆದರೆ ಮಧ್ಯದಲ್ಲೇ ಅವರನ್ನು ತಡೆದ ಪೊಲೀಸರು ಬಸ್ಕಿ ಹೊಡೆಸಿ ವಾಪಸ್ ಕಳಿಸಿದ್ದಾರೆ.
ನಿಯಮ ಉಲ್ಲಂಘಿಸಿ ಚಾರಣಕ್ಕೆ ತೆರಳಿದ ಪ್ರವಾಸಿಗರ ಗುಂಪುಗಳನ್ನು ರೈಲ್ವೆ ರಕ್ಷಣಾ ದಳದ ಪೊಲೀಸರು ಶಿಕ್ಷೆಯಾಗಿ ಬಸ್ಕಿ ಹೊಡೆಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಮಳೆಗಾಲದಲ್ಲಿ ದೂದ್ ಸಾಗರ್ ಮೈದುಂಬಿ ಹರಿಯುತ್ತದೆ. ಹೀಗಾಗಿ ಅದನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಈ ಬಾರಿ ಗೋವಾ ಸರ್ಕಾರದ ನಿರ್ಧಾರದಿಂದ ಪ್ರವಾಸಿಗರಿಗೆ ನಿರಾಶೆ ಮೂಡಿದೆ.
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…