BREAKING NEWS

ಅಪಘಾತದ 51 ಗಂಟೆಗಳ ನಂತರ ಬಾಲಸೋರ್ ನಲ್ಲಿ ರೈಲು ಸಂಚಾರ ಆರಂಭ

ಭುವನೇಶ್ವರ : ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು 51 ಗಂಟೆಗಳ ಬಳಿಕ ಸಂಚಾರ ಪುನಾರಂಭಮಾಡಿದೆ.

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲುಗಳ ಅಪಘಾತದಲ್ಲಿ 275 ಜನರು ಮೃತಪಟ್ಟಿದ್ದರು. 1,000 ಕ್ಕೂ ಹೆಚ್ಚು ಜನರು ಗಾಯಗೊಂಡರು, ಭಾರತೀಯ ರೈಲ್ವೆ ಸೋಮವಾರ ಅಪಘಾತ ಪೀಡಿತ ಮಾರ್ಗದ ಹಳಿಗಳ ಮೇಲೆ ಪ್ರಯಾಣಿಕ ರೈಲುಗಳ ಓಡಾಟವನ್ನು ಪುನರಾರಂಭಿಸಿದೆ. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ನಿನ್ನೆ ಗೂಡ್ಸ್ ರೈಲಿನ ಸಿಬ್ಬಂದಿಗೆ ಕೈ ಬೀಸಿ ಸುರಕ್ಷಿತ ಪ್ರಯಾಣಕ್ಕಾಗಿ ಪ್ರಾರ್ಥಿಸಿದರು. ಎರಡೂ ಹಳಿಗಳ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ. ಅಪಘಾತದ 51 ಗಂಟೆಗಳ ನಂತರ ಎರಡೂ ಮಾರ್ಗಗಳಲ್ಲಿ ಸಾಮಾನ್ಯ ರೈಲು ಸೇವೆಗಳನ್ನು ಈಗ ಪುನಾರಂಭ ಮಾಡಲಾಗಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಅಶ್ವಿನ್ ವೈಷ್ಣವ್, ವಿದ್ಯುನ್ಮಾನ ಇಂಟರ್ ಲಾಕಿಂಗ್ ಬದಲಾವಣೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದರು.

ಇಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಎನ್ನುವುದು ಸಿಗ್ನಲ್ ಉಪಕರಣದ ಒಂದು ವ್ಯವಸ್ಥೆಯಾಗಿದ್ದು ಅದು ಹಳಿಗಳ ಜೋಡಣೆಯ ಮೂಲಕ ರೈಲುಗಳ ನಡುವೆ ಸಂಘರ್ಷದ ಚಲನೆಯನ್ನು ತಡೆಯುತ್ತದೆ. ಅಸಮರ್ಪಕ ಅನುಕ್ರಮದಲ್ಲಿ ಸಂಕೇತಗಳನ್ನು ಬದಲಾಯಿಸುವುದನ್ನು ತಡೆಯಲು ಇದು ಮೂಲಭೂತವಾಗಿ ಸುರಕ್ಷತಾ ಕ್ರಮವಾಗಿದೆ. ಮಾರ್ಗವು ಸುರಕ್ಷಿತವೆಂದು ಸಾಬೀತುಪಡಿಸದ ಹೊರತು ಯಾವುದೇ ರೈಲು ಮುಂದುವರಿಯಲು ಸಂಕೇತವನ್ನು ಪಡೆಯುವುದಿಲ್ಲ ಎಂಬುದು ಈ ವ್ಯವಸ್ಥೆಯಾಗಿದೆ.

ಇನ್ನು 275 ಜನರ ಸಾವಿಗೆ ಕಾರಣವಾದ ಮತ್ತು 1000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸಲಾಗಿದೆ. ಈ ಅಪಘಾತ ಸಂಭವಿಸಿದ ರೀತಿ, ಪರಿಸ್ಥಿತಿಗಳನ್ನು ನೋಡುವುದು ಮತ್ತು ಆಡಳಿತಾತ್ಮಕ ಮಾಹಿತಿಯ ಪ್ರಕಾರ. ರೈಲ್ವೆ ಮಂಡಳಿಯು ಸಿಬಿಐಗೆ ತನಿಖೆಯನ್ನು ಶಿಫಾರಸು ಮಾಡುತ್ತಿದೆ ಎಂದು ಅಶ್ವಿನ್ ವೈಷ್ಣವ್ ಹೇಳಿದ್ದಾರೆ.

ಮೊನ್ನೆ ಜೂನ್ 2ರಂದು ಸಾಯಂಕಾಲ 7 ಗಂಟೆ ಸುಮಾರಿಗೆ ದಕ್ಷಿಣ ಕೋಲ್ಕತ್ತಾದಿಂದ ಸುಮಾರು 250 ಕಿಲೋ ಮೀಟರ್ ದೂರದಲ್ಲಿ ಮತ್ತು ಭುವನೇಶ್ವರಿಂದ 170 ಕಿಲೋ ಮೀಟರ್ ದೂರದಲ್ಲಿರುವ ಬಾಲಸೋರೆ ಜಿಲ್ಲೆಯ ಬಹನಗ ಬಜಾರ್ ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದೆ. ಬೆಂಗಳೂರು-ಹೌರಾ ಎಕ್ಸ್ ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೊರೊಮಂಡಲ್ ಎಕ್ಸ್ ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಅಪಘಾತ ಸಂಭವಿಸಿತು.

lokesh

Recent Posts

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

1 hour ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

1 hour ago

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

2 hours ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

2 hours ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

3 hours ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

3 hours ago