BREAKING NEWS

ಅಪಘಾತದ 51 ಗಂಟೆಗಳ ನಂತರ ಬಾಲಸೋರ್ ನಲ್ಲಿ ರೈಲು ಸಂಚಾರ ಆರಂಭ

ಭುವನೇಶ್ವರ : ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು 51 ಗಂಟೆಗಳ ಬಳಿಕ ಸಂಚಾರ ಪುನಾರಂಭಮಾಡಿದೆ.

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲುಗಳ ಅಪಘಾತದಲ್ಲಿ 275 ಜನರು ಮೃತಪಟ್ಟಿದ್ದರು. 1,000 ಕ್ಕೂ ಹೆಚ್ಚು ಜನರು ಗಾಯಗೊಂಡರು, ಭಾರತೀಯ ರೈಲ್ವೆ ಸೋಮವಾರ ಅಪಘಾತ ಪೀಡಿತ ಮಾರ್ಗದ ಹಳಿಗಳ ಮೇಲೆ ಪ್ರಯಾಣಿಕ ರೈಲುಗಳ ಓಡಾಟವನ್ನು ಪುನರಾರಂಭಿಸಿದೆ. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ನಿನ್ನೆ ಗೂಡ್ಸ್ ರೈಲಿನ ಸಿಬ್ಬಂದಿಗೆ ಕೈ ಬೀಸಿ ಸುರಕ್ಷಿತ ಪ್ರಯಾಣಕ್ಕಾಗಿ ಪ್ರಾರ್ಥಿಸಿದರು. ಎರಡೂ ಹಳಿಗಳ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ. ಅಪಘಾತದ 51 ಗಂಟೆಗಳ ನಂತರ ಎರಡೂ ಮಾರ್ಗಗಳಲ್ಲಿ ಸಾಮಾನ್ಯ ರೈಲು ಸೇವೆಗಳನ್ನು ಈಗ ಪುನಾರಂಭ ಮಾಡಲಾಗಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಅಶ್ವಿನ್ ವೈಷ್ಣವ್, ವಿದ್ಯುನ್ಮಾನ ಇಂಟರ್ ಲಾಕಿಂಗ್ ಬದಲಾವಣೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದರು.

ಇಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಎನ್ನುವುದು ಸಿಗ್ನಲ್ ಉಪಕರಣದ ಒಂದು ವ್ಯವಸ್ಥೆಯಾಗಿದ್ದು ಅದು ಹಳಿಗಳ ಜೋಡಣೆಯ ಮೂಲಕ ರೈಲುಗಳ ನಡುವೆ ಸಂಘರ್ಷದ ಚಲನೆಯನ್ನು ತಡೆಯುತ್ತದೆ. ಅಸಮರ್ಪಕ ಅನುಕ್ರಮದಲ್ಲಿ ಸಂಕೇತಗಳನ್ನು ಬದಲಾಯಿಸುವುದನ್ನು ತಡೆಯಲು ಇದು ಮೂಲಭೂತವಾಗಿ ಸುರಕ್ಷತಾ ಕ್ರಮವಾಗಿದೆ. ಮಾರ್ಗವು ಸುರಕ್ಷಿತವೆಂದು ಸಾಬೀತುಪಡಿಸದ ಹೊರತು ಯಾವುದೇ ರೈಲು ಮುಂದುವರಿಯಲು ಸಂಕೇತವನ್ನು ಪಡೆಯುವುದಿಲ್ಲ ಎಂಬುದು ಈ ವ್ಯವಸ್ಥೆಯಾಗಿದೆ.

ಇನ್ನು 275 ಜನರ ಸಾವಿಗೆ ಕಾರಣವಾದ ಮತ್ತು 1000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸಲಾಗಿದೆ. ಈ ಅಪಘಾತ ಸಂಭವಿಸಿದ ರೀತಿ, ಪರಿಸ್ಥಿತಿಗಳನ್ನು ನೋಡುವುದು ಮತ್ತು ಆಡಳಿತಾತ್ಮಕ ಮಾಹಿತಿಯ ಪ್ರಕಾರ. ರೈಲ್ವೆ ಮಂಡಳಿಯು ಸಿಬಿಐಗೆ ತನಿಖೆಯನ್ನು ಶಿಫಾರಸು ಮಾಡುತ್ತಿದೆ ಎಂದು ಅಶ್ವಿನ್ ವೈಷ್ಣವ್ ಹೇಳಿದ್ದಾರೆ.

ಮೊನ್ನೆ ಜೂನ್ 2ರಂದು ಸಾಯಂಕಾಲ 7 ಗಂಟೆ ಸುಮಾರಿಗೆ ದಕ್ಷಿಣ ಕೋಲ್ಕತ್ತಾದಿಂದ ಸುಮಾರು 250 ಕಿಲೋ ಮೀಟರ್ ದೂರದಲ್ಲಿ ಮತ್ತು ಭುವನೇಶ್ವರಿಂದ 170 ಕಿಲೋ ಮೀಟರ್ ದೂರದಲ್ಲಿರುವ ಬಾಲಸೋರೆ ಜಿಲ್ಲೆಯ ಬಹನಗ ಬಜಾರ್ ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದೆ. ಬೆಂಗಳೂರು-ಹೌರಾ ಎಕ್ಸ್ ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೊರೊಮಂಡಲ್ ಎಕ್ಸ್ ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಅಪಘಾತ ಸಂಭವಿಸಿತು.

lokesh

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

2 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

14 hours ago