BREAKING NEWS

ಮೈಸೂರಿನಿಂದ ಅಯೋಧ್ಯೆಗೆ ವಿಶೇಷ ರೈಲು ಸಂಚಾರ: ವೇಳಾಪಟ್ಟಿ ಇಲ್ಲಿದೆ!

ಮೈಸೂರು: ಶ್ರೀರಾಮ ಪ್ರಭುವಿನ ದರ್ಶನಕ್ಕೆ ಜಿಲ್ಲೆಯಿಂದ ತೆರಳುವ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಯೋಧ್ಯೆಗೆ ಮೈಸೂರಿನಿಂದ ರೈಲು ಸಂಪರ್ಕ ಕಲ್ಪಿಸಲಾಗಿದೆ.

ಮೈಸೂರು ಮಾರ್ಗವಾಗಿ ಅಯೋಧ್ಯೆಗೆ ಅತ್ಯಂತ ವೇಗವಾಗಿ ಚಲಿಸುವ ಮೈಸೂರು-ಅಯೋಧ್ಯೆ-ಮೈಸೂರು ರೈಲು ಸೇವೆ ಫೇಬ್ರವರಿ 4ರಿಂದ ಆರಂಭವಾಗಲಿದೆ. ಈ ಬಗ್ಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮೈಸೂರಿನಿಂದ ಅಯೋಧ್ಯೆಗೆ ರೈಲು ಫೆಬ್ರವರಿ 4 ಮತ್ತು ಫೆಬ್ರವರಿ 18 ರಂದು ಓಡಾಟ ನಡೆಸಲಿದೆ. ಅದರಂತೆಯೇ ಅಯೋಧ್ಯೆಯಿಂದ ಮೈಸೂರಿಗೆ ಫೆಬ್ರವರಿ 7 ಮತ್ತು ಫೆಬ್ರವರಿ 21 ರಂದು ಸಂಚಾರ ನಡೆಸಿಲಿದೆ.

ರೈಲ್ವೆ ಇಲಾಖೆ ತಯಾರಿಸಿರುವ ಈ ವೇಳಾಪಟ್ಟಿ ಅನ್ವಯ ರೈಲು ಮೈಸೂರಿನಿಂದ ಫೆಬ್ರವರಿ 4 ರಂದು ರಾತ್ರಿ 12.15 ಕ್ಕೆ ಹೊರಟು ಅಯೋಧ್ಯೆಗೆ ಫೆಬ್ರವರಿ 7ರ ರಾತ್ರಿ 12.55ಕ್ಕೆ ತಲುಪಲಿದೆ. ಇನ್ನು ಫೆಬ್ರವರಿ 18 ರಂದು ಇದೇ ಸಮಯಕ್ಕೆ ಹೊರಡಲಿರುವ ರೈಲು ಫೆಬ್ರವರಿ 21 ರಂದು ಅಯೋಧ್ಯೆ ತಲುಪಲಿದೆ.

ಅಯೋಧ್ಯೆಯಿಂದ ಮೈಸೂರಿನ ಕಡೆ ಸಂಚರಿಸಲಿರುವ ರೈಲು ಫೆಬ್ರವರಿ 7 ರಂದು ರಾತ್ರಿ 9.20ಕ್ಕೆ ಅಯೋಧ್ಯೆಯಿಂದ ಹೊರಟು ಮೈಸೂರಿಗೆ ಫೆಬ್ರವರಿ 10 ರ ಬೆಳಗ್ಗೆ 7 ಗಂಟೆಗೆ ತಲುಪಲಿದೆ. ಫೆಬ್ರವರಿ 21 ರಂದು ಕೂಡಾ ಇದೇ ಸಮಯಕ್ಕೆ ರೈಲು ಮೈಸೂರನನ್ನು ತಲುಪಲಿದೆ.

22 ಕೋಚ್‌ ಹೊಂದಿರುವ ಈ ರೈಲು ಮೈಸೂರು ಮಾರ್ಗವಾಗಿ ರಾಜ್ಯದ ಬೆಂಗಳೂರು, ತುಮಕೂರು, ಅರಸೀಕೆರೆ ಜಂಕ್ಷನ್‌, ಕಡೂರು, ಬೀರೂರು ಜಂಕ್ಷನ್‌ಗಳಲ್ಲಿ ನಿಲ್ದಾಣ ಹೊಂದಿರಲಿದೆ.

https://x.com/mepratap/status/1746045102034997294?s=20

andolanait

Recent Posts

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

43 mins ago

ಮರ್ಯಾದೆಗೇಡು ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

1 hour ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

2 hours ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

2 hours ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

2 hours ago

ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…

3 hours ago