ಮೈಸೂರು: ಶ್ರೀರಾಮ ಪ್ರಭುವಿನ ದರ್ಶನಕ್ಕೆ ಜಿಲ್ಲೆಯಿಂದ ತೆರಳುವ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಯೋಧ್ಯೆಗೆ ಮೈಸೂರಿನಿಂದ ರೈಲು ಸಂಪರ್ಕ ಕಲ್ಪಿಸಲಾಗಿದೆ.
ಮೈಸೂರು ಮಾರ್ಗವಾಗಿ ಅಯೋಧ್ಯೆಗೆ ಅತ್ಯಂತ ವೇಗವಾಗಿ ಚಲಿಸುವ ಮೈಸೂರು-ಅಯೋಧ್ಯೆ-ಮೈಸೂರು ರೈಲು ಸೇವೆ ಫೇಬ್ರವರಿ 4ರಿಂದ ಆರಂಭವಾಗಲಿದೆ. ಈ ಬಗ್ಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮೈಸೂರಿನಿಂದ ಅಯೋಧ್ಯೆಗೆ ರೈಲು ಫೆಬ್ರವರಿ 4 ಮತ್ತು ಫೆಬ್ರವರಿ 18 ರಂದು ಓಡಾಟ ನಡೆಸಲಿದೆ. ಅದರಂತೆಯೇ ಅಯೋಧ್ಯೆಯಿಂದ ಮೈಸೂರಿಗೆ ಫೆಬ್ರವರಿ 7 ಮತ್ತು ಫೆಬ್ರವರಿ 21 ರಂದು ಸಂಚಾರ ನಡೆಸಿಲಿದೆ.
ರೈಲ್ವೆ ಇಲಾಖೆ ತಯಾರಿಸಿರುವ ಈ ವೇಳಾಪಟ್ಟಿ ಅನ್ವಯ ರೈಲು ಮೈಸೂರಿನಿಂದ ಫೆಬ್ರವರಿ 4 ರಂದು ರಾತ್ರಿ 12.15 ಕ್ಕೆ ಹೊರಟು ಅಯೋಧ್ಯೆಗೆ ಫೆಬ್ರವರಿ 7ರ ರಾತ್ರಿ 12.55ಕ್ಕೆ ತಲುಪಲಿದೆ. ಇನ್ನು ಫೆಬ್ರವರಿ 18 ರಂದು ಇದೇ ಸಮಯಕ್ಕೆ ಹೊರಡಲಿರುವ ರೈಲು ಫೆಬ್ರವರಿ 21 ರಂದು ಅಯೋಧ್ಯೆ ತಲುಪಲಿದೆ.
ಅಯೋಧ್ಯೆಯಿಂದ ಮೈಸೂರಿನ ಕಡೆ ಸಂಚರಿಸಲಿರುವ ರೈಲು ಫೆಬ್ರವರಿ 7 ರಂದು ರಾತ್ರಿ 9.20ಕ್ಕೆ ಅಯೋಧ್ಯೆಯಿಂದ ಹೊರಟು ಮೈಸೂರಿಗೆ ಫೆಬ್ರವರಿ 10 ರ ಬೆಳಗ್ಗೆ 7 ಗಂಟೆಗೆ ತಲುಪಲಿದೆ. ಫೆಬ್ರವರಿ 21 ರಂದು ಕೂಡಾ ಇದೇ ಸಮಯಕ್ಕೆ ರೈಲು ಮೈಸೂರನನ್ನು ತಲುಪಲಿದೆ.
22 ಕೋಚ್ ಹೊಂದಿರುವ ಈ ರೈಲು ಮೈಸೂರು ಮಾರ್ಗವಾಗಿ ರಾಜ್ಯದ ಬೆಂಗಳೂರು, ತುಮಕೂರು, ಅರಸೀಕೆರೆ ಜಂಕ್ಷನ್, ಕಡೂರು, ಬೀರೂರು ಜಂಕ್ಷನ್ಗಳಲ್ಲಿ ನಿಲ್ದಾಣ ಹೊಂದಿರಲಿದೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…