BREAKING NEWS

ಮೈಸೂರಿನಿಂದ ಅಯೋಧ್ಯೆಗೆ ವಿಶೇಷ ರೈಲು ಸಂಚಾರ: ವೇಳಾಪಟ್ಟಿ ಇಲ್ಲಿದೆ!

ಮೈಸೂರು: ಶ್ರೀರಾಮ ಪ್ರಭುವಿನ ದರ್ಶನಕ್ಕೆ ಜಿಲ್ಲೆಯಿಂದ ತೆರಳುವ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಯೋಧ್ಯೆಗೆ ಮೈಸೂರಿನಿಂದ ರೈಲು ಸಂಪರ್ಕ ಕಲ್ಪಿಸಲಾಗಿದೆ.

ಮೈಸೂರು ಮಾರ್ಗವಾಗಿ ಅಯೋಧ್ಯೆಗೆ ಅತ್ಯಂತ ವೇಗವಾಗಿ ಚಲಿಸುವ ಮೈಸೂರು-ಅಯೋಧ್ಯೆ-ಮೈಸೂರು ರೈಲು ಸೇವೆ ಫೇಬ್ರವರಿ 4ರಿಂದ ಆರಂಭವಾಗಲಿದೆ. ಈ ಬಗ್ಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮೈಸೂರಿನಿಂದ ಅಯೋಧ್ಯೆಗೆ ರೈಲು ಫೆಬ್ರವರಿ 4 ಮತ್ತು ಫೆಬ್ರವರಿ 18 ರಂದು ಓಡಾಟ ನಡೆಸಲಿದೆ. ಅದರಂತೆಯೇ ಅಯೋಧ್ಯೆಯಿಂದ ಮೈಸೂರಿಗೆ ಫೆಬ್ರವರಿ 7 ಮತ್ತು ಫೆಬ್ರವರಿ 21 ರಂದು ಸಂಚಾರ ನಡೆಸಿಲಿದೆ.

ರೈಲ್ವೆ ಇಲಾಖೆ ತಯಾರಿಸಿರುವ ಈ ವೇಳಾಪಟ್ಟಿ ಅನ್ವಯ ರೈಲು ಮೈಸೂರಿನಿಂದ ಫೆಬ್ರವರಿ 4 ರಂದು ರಾತ್ರಿ 12.15 ಕ್ಕೆ ಹೊರಟು ಅಯೋಧ್ಯೆಗೆ ಫೆಬ್ರವರಿ 7ರ ರಾತ್ರಿ 12.55ಕ್ಕೆ ತಲುಪಲಿದೆ. ಇನ್ನು ಫೆಬ್ರವರಿ 18 ರಂದು ಇದೇ ಸಮಯಕ್ಕೆ ಹೊರಡಲಿರುವ ರೈಲು ಫೆಬ್ರವರಿ 21 ರಂದು ಅಯೋಧ್ಯೆ ತಲುಪಲಿದೆ.

ಅಯೋಧ್ಯೆಯಿಂದ ಮೈಸೂರಿನ ಕಡೆ ಸಂಚರಿಸಲಿರುವ ರೈಲು ಫೆಬ್ರವರಿ 7 ರಂದು ರಾತ್ರಿ 9.20ಕ್ಕೆ ಅಯೋಧ್ಯೆಯಿಂದ ಹೊರಟು ಮೈಸೂರಿಗೆ ಫೆಬ್ರವರಿ 10 ರ ಬೆಳಗ್ಗೆ 7 ಗಂಟೆಗೆ ತಲುಪಲಿದೆ. ಫೆಬ್ರವರಿ 21 ರಂದು ಕೂಡಾ ಇದೇ ಸಮಯಕ್ಕೆ ರೈಲು ಮೈಸೂರನನ್ನು ತಲುಪಲಿದೆ.

22 ಕೋಚ್‌ ಹೊಂದಿರುವ ಈ ರೈಲು ಮೈಸೂರು ಮಾರ್ಗವಾಗಿ ರಾಜ್ಯದ ಬೆಂಗಳೂರು, ತುಮಕೂರು, ಅರಸೀಕೆರೆ ಜಂಕ್ಷನ್‌, ಕಡೂರು, ಬೀರೂರು ಜಂಕ್ಷನ್‌ಗಳಲ್ಲಿ ನಿಲ್ದಾಣ ಹೊಂದಿರಲಿದೆ.

https://x.com/mepratap/status/1746045102034997294?s=20

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago