BREAKING NEWS

211 ಪೊಲೀಸ್​ ಇನ್ಸ್​ಪೆಕ್ಟರ್ ವರ್ಗಾವಣೆ : ಕೆಲವರ ಟ್ರಾನ್ಸ್​ಫರ್​ಗೆ ಸರ್ಕಾರದಿಂದ ತಡೆ

ಬೆಂಗಳೂರು : ವಿರೋಧ ಪಕ್ಷಗಳ ಹಲವು ಆರೋಪಗ ನಡುವೆಯೂ ಕಾಂಗ್ರೆಸ್​ ಸರ್ಕಾರದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಜೋರಾಗಿದೆ. ನೆನ್ನೆ ವರ್ಗಾವಣೆ ಮಾಡಿದ್ದ ಕೆಲ ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ಸರ್ಕಾರ ತಡೆ ಹಿಡಿದೆ. ​

ನೆನ್ನೆ ಬರೋಬ್ಬರಿ 211 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಏಕಾಏಕಿ ಇಂದು ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಯಾವೆಲ್ಲಾ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ?

1.ಜಗದೀಶ್ – ಕೆ ಎಸ್ ಲೇಔಟ್ ಠಾಣೆ
2.ವಜ್ರಮುನಿ – ಕೆ ಆರ್ ಮಾರ್ಕೆಟ್
3.ರವಿಕುಮಾರ್ – ಪುಟ್ಟೇನಹಳ್ಳಿ
4.ಅನಿಲ್‌ಕುಮಾರ್ – ಮಲ್ಲೇಶ್ವರಂ
5.ಜಿಗಣಿ – ಎಡ್ವಿನ್ ಪ್ರದೀಪ್
6.ರವಿ ಗೌಡ ಬಿ- ಯಶವಂತಪುರ ಟ್ರಾಫಿಕ್ ಸಂಚಾರ
7.ಯಶತಪುರ ಲಾ ಅಂಡ್ ಆರ್ಡರ್ – ಧನಂಜಯ್
8.ಲಕ್ಷ್ಮಣ್ ಜೆ – ನಂದಿನಿ ಲೇಔಟ್ ಪೊಲೀಸ್
9.ಅಶತ್ಥಗೌಡ- ಜಾನ್ಞಭಾರತಿ ಪೊಲೀಸ್ ಠಾಣೆ
10.ಗೋವಿಂದರಾಜು – ಪಿಣ್ಯ ಪೊಲೀಸ್ ಠಾಣೆ.
11.ಕೃಷ್ಣಕುಮಾರ್- ಬೇಗೂರು ಪೊಲೀಸ್ ಠಾಣೆ

ಒಟ್ಟು 11 ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ ನೀಡಿ ಡಿಜಿಐಜಿಪಿ ಕಚೇರಿಯಿಂದ ಆದೇಶ ಹೊರಬಿದ್ದಿದೆ.

ನೆನ್ನೆ ಒಂದೇ ದಿನ 211 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಬಹುತೇಕ ಜಿಲ್ಲೆ, ಸಿಸಿಬಿ , ಗುಪ್ತ ವಾರ್ತೆಯ ಪೊಲೀಸ್ ಇನ್ ಸ್ಪೆಕ್ಟರ್‌ಗಳ ವರ್ಗಾವಣೆ ಆಗಿತ್ತು. ಇದರಲ್ಲಿ ಇದೀಗ ಕೆಲವರ ವರ್ಗಾವಣೆಯನ್ನು ದಿಢೀರ್ ತಡೆಹಿಡಿದಿರುವುದು ಚರ್ಚೆ ಹುಟ್ಟುಹಾಕಿದೆ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago