BREAKING NEWS

211 ಪೊಲೀಸ್​ ಇನ್ಸ್​ಪೆಕ್ಟರ್ ವರ್ಗಾವಣೆ : ಕೆಲವರ ಟ್ರಾನ್ಸ್​ಫರ್​ಗೆ ಸರ್ಕಾರದಿಂದ ತಡೆ

ಬೆಂಗಳೂರು : ವಿರೋಧ ಪಕ್ಷಗಳ ಹಲವು ಆರೋಪಗ ನಡುವೆಯೂ ಕಾಂಗ್ರೆಸ್​ ಸರ್ಕಾರದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಜೋರಾಗಿದೆ. ನೆನ್ನೆ ವರ್ಗಾವಣೆ ಮಾಡಿದ್ದ ಕೆಲ ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ಸರ್ಕಾರ ತಡೆ ಹಿಡಿದೆ. ​

ನೆನ್ನೆ ಬರೋಬ್ಬರಿ 211 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಏಕಾಏಕಿ ಇಂದು ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಯಾವೆಲ್ಲಾ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ?

1.ಜಗದೀಶ್ – ಕೆ ಎಸ್ ಲೇಔಟ್ ಠಾಣೆ
2.ವಜ್ರಮುನಿ – ಕೆ ಆರ್ ಮಾರ್ಕೆಟ್
3.ರವಿಕುಮಾರ್ – ಪುಟ್ಟೇನಹಳ್ಳಿ
4.ಅನಿಲ್‌ಕುಮಾರ್ – ಮಲ್ಲೇಶ್ವರಂ
5.ಜಿಗಣಿ – ಎಡ್ವಿನ್ ಪ್ರದೀಪ್
6.ರವಿ ಗೌಡ ಬಿ- ಯಶವಂತಪುರ ಟ್ರಾಫಿಕ್ ಸಂಚಾರ
7.ಯಶತಪುರ ಲಾ ಅಂಡ್ ಆರ್ಡರ್ – ಧನಂಜಯ್
8.ಲಕ್ಷ್ಮಣ್ ಜೆ – ನಂದಿನಿ ಲೇಔಟ್ ಪೊಲೀಸ್
9.ಅಶತ್ಥಗೌಡ- ಜಾನ್ಞಭಾರತಿ ಪೊಲೀಸ್ ಠಾಣೆ
10.ಗೋವಿಂದರಾಜು – ಪಿಣ್ಯ ಪೊಲೀಸ್ ಠಾಣೆ.
11.ಕೃಷ್ಣಕುಮಾರ್- ಬೇಗೂರು ಪೊಲೀಸ್ ಠಾಣೆ

ಒಟ್ಟು 11 ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ ನೀಡಿ ಡಿಜಿಐಜಿಪಿ ಕಚೇರಿಯಿಂದ ಆದೇಶ ಹೊರಬಿದ್ದಿದೆ.

ನೆನ್ನೆ ಒಂದೇ ದಿನ 211 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಬಹುತೇಕ ಜಿಲ್ಲೆ, ಸಿಸಿಬಿ , ಗುಪ್ತ ವಾರ್ತೆಯ ಪೊಲೀಸ್ ಇನ್ ಸ್ಪೆಕ್ಟರ್‌ಗಳ ವರ್ಗಾವಣೆ ಆಗಿತ್ತು. ಇದರಲ್ಲಿ ಇದೀಗ ಕೆಲವರ ವರ್ಗಾವಣೆಯನ್ನು ದಿಢೀರ್ ತಡೆಹಿಡಿದಿರುವುದು ಚರ್ಚೆ ಹುಟ್ಟುಹಾಕಿದೆ.

lokesh

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

3 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

7 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

7 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

8 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

9 hours ago