BREAKING NEWS

211 ಪೊಲೀಸ್​ ಇನ್ಸ್​ಪೆಕ್ಟರ್ ವರ್ಗಾವಣೆ : ಕೆಲವರ ಟ್ರಾನ್ಸ್​ಫರ್​ಗೆ ಸರ್ಕಾರದಿಂದ ತಡೆ

ಬೆಂಗಳೂರು : ವಿರೋಧ ಪಕ್ಷಗಳ ಹಲವು ಆರೋಪಗ ನಡುವೆಯೂ ಕಾಂಗ್ರೆಸ್​ ಸರ್ಕಾರದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಜೋರಾಗಿದೆ. ನೆನ್ನೆ ವರ್ಗಾವಣೆ ಮಾಡಿದ್ದ ಕೆಲ ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ಸರ್ಕಾರ ತಡೆ ಹಿಡಿದೆ. ​

ನೆನ್ನೆ ಬರೋಬ್ಬರಿ 211 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಏಕಾಏಕಿ ಇಂದು ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಯಾವೆಲ್ಲಾ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ?

1.ಜಗದೀಶ್ – ಕೆ ಎಸ್ ಲೇಔಟ್ ಠಾಣೆ
2.ವಜ್ರಮುನಿ – ಕೆ ಆರ್ ಮಾರ್ಕೆಟ್
3.ರವಿಕುಮಾರ್ – ಪುಟ್ಟೇನಹಳ್ಳಿ
4.ಅನಿಲ್‌ಕುಮಾರ್ – ಮಲ್ಲೇಶ್ವರಂ
5.ಜಿಗಣಿ – ಎಡ್ವಿನ್ ಪ್ರದೀಪ್
6.ರವಿ ಗೌಡ ಬಿ- ಯಶವಂತಪುರ ಟ್ರಾಫಿಕ್ ಸಂಚಾರ
7.ಯಶತಪುರ ಲಾ ಅಂಡ್ ಆರ್ಡರ್ – ಧನಂಜಯ್
8.ಲಕ್ಷ್ಮಣ್ ಜೆ – ನಂದಿನಿ ಲೇಔಟ್ ಪೊಲೀಸ್
9.ಅಶತ್ಥಗೌಡ- ಜಾನ್ಞಭಾರತಿ ಪೊಲೀಸ್ ಠಾಣೆ
10.ಗೋವಿಂದರಾಜು – ಪಿಣ್ಯ ಪೊಲೀಸ್ ಠಾಣೆ.
11.ಕೃಷ್ಣಕುಮಾರ್- ಬೇಗೂರು ಪೊಲೀಸ್ ಠಾಣೆ

ಒಟ್ಟು 11 ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ ನೀಡಿ ಡಿಜಿಐಜಿಪಿ ಕಚೇರಿಯಿಂದ ಆದೇಶ ಹೊರಬಿದ್ದಿದೆ.

ನೆನ್ನೆ ಒಂದೇ ದಿನ 211 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಬಹುತೇಕ ಜಿಲ್ಲೆ, ಸಿಸಿಬಿ , ಗುಪ್ತ ವಾರ್ತೆಯ ಪೊಲೀಸ್ ಇನ್ ಸ್ಪೆಕ್ಟರ್‌ಗಳ ವರ್ಗಾವಣೆ ಆಗಿತ್ತು. ಇದರಲ್ಲಿ ಇದೀಗ ಕೆಲವರ ವರ್ಗಾವಣೆಯನ್ನು ದಿಢೀರ್ ತಡೆಹಿಡಿದಿರುವುದು ಚರ್ಚೆ ಹುಟ್ಟುಹಾಕಿದೆ.

lokesh

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

1 hour ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

2 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

3 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

3 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

3 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

4 hours ago