BREAKING NEWS

ಸೂರ್ಯಗ್ರಹಣದಂದು ಸೂರ್ಯನತ್ತ ತ್ರಿವಳಿ ರಾಕೆಟ್‌ ಉಡಾವಣೆ

ನವದೆಹಲಿ : ಈ ಬಾರಿಯ ಸೂರ್ಯಗ್ರಹಣ ತುಸು ಹೆಚ್ಚೇ ಮಹತ್ವ ಹೊಂದಿದೆ. ಎಕೆಂದರೆ ಅಂದು ಅಂದರೆ ಅಕ್ಟೋಬರ್‌ 14 ರಂದು ಶನಿವಾರ ಅಮೆರಿಕದ ನಾಸಾ ಸಂಸ್ಥೆಯ ಖಗೋಳ ವಿಜ್ಞಾನಿಗಳು ಸೂರ್ಯನತ್ತ ತ್ರಿವಳಿ ರಾಕೆಟ್‌ಗಳನ್ನು ಹಾರಿಸಲಿದ್ದಾರೆ. ಇಲ್ಲಿ ಹೆಮ್ಮೆಯ ಸಂಗತಿಯೆಂದರೆ ಭಾರತೀಯ ಮೂಲದ ವಿಜ್ಞಾನಿ ಡಾ. ಆರೋಹ್ ಬರ್ಜತ್ಯಾ ಈ ಯೋಜನೆಯ ಸಾರಥ್ಯ ವಹಿಸಿದ್ದಾರೆ.

ಪ್ರಸ್ತುತ ಅವರು ಇಂಜಿನಿಯರಿಂಗ್ ಭೌತಶಾಸ್ತ್ರದ ಪ್ರಾಧ್ಯಾಪಕ ಮತ್ತು ಫ್ಲೋರಿಡಾದ ಎಂಬ್ರಿ-ರಿಡಲ್ ಏರೋನಾಟಿಕಲ್ ವಿಶ್ವವಿದ್ಯಾನಿಲಯದ ಬಾಹ್ಯಾಕಾಶ ಮತ್ತು ವಾತಾವರಣದ ಉಪಕರಣ ಪ್ರಯೋಗಾಲಯದ ನಿರ್ದೇಶಕರಾಗಿದ್ದಾರೆ. ಡಾ ಆರೋಹ್ ಬರ್ಜತ್ಯಾ ಅವರು ಬಹು-ಸಂಸ್ಥೆಗಳ ನಾಸಾ ರಾಕೆಟ್ ಮಿಷನ್ ಅನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಅಯಾನುಗೋಳ ಎಂದೂ ಕರೆಯಲ್ಪಡುವ ನಮ್ಮ ಮೇಲಿನ ವಾತಾವರಣದ ಮೇಲೆ ಗ್ರಹಣಗಳ ಪರಿಣಾಮಗಳನ್ನು ಅಧ್ಯಯನ ಮಾಡಲು ವಾರ್ಷಿಕ ಸೂರ್ಯಗ್ರಹಣದ ಸಮಯದಲ್ಲಿ ಈ ಮಹತ್ವದ ಯೋಜನೆ ಕೈಗೊಳ್ಳಲಾಗಿದೆ.

ಅಕ್ಟೋಬರ್ 14, 2023 ರಂದು ಘಟಿಸುವ ಗ್ರಹಣವು ವಾರ್ಷಿಕ ಸೂರ್ಯಗ್ರಹಣವಾಗಿದ್ದು, ಅದನ್ನು ಬೆಂಕಿಯ ಉಂಗುರ ಎಂದೂ ಕರೆಯುತ್ತಾರೆ. ಪ್ರಮುಖವಾಗಿ ಅಮರಿಕ, ಮೆಕ್ಸಿಕೊ ಮತ್ತು ದಕ್ಷಿಣ ಮತ್ತು ಮಧ್ಯ ಅಮೆರಿಕದ ಹಲವು ದೇಶಗಳಲ್ಲಿ ಗೋಚರಿಸುತ್ತದೆ.

ವಿಜ್ಞಾನಿ ಆರೋಹ್ ಬರ್ಜತ್ಯಾ ಅವರ ಈ ರಾಕೆಟ್ ಯೋಜನೆಯ ಪ್ರಧಾನ ವಿಷಯ ಎಕ್ಲಿಪ್ಸ್ ಪಾತ್ ಸುತ್ತಲ ವಾತಾವರಣದ ಪ್ರಕ್ಷುಬ್ಧತೆಗಳನ್ನು ಅಧ್ಯಯನ ಮಾಡುವುದಾಗಿದೆ. ಈ ಯೋಜನೆಯಲ್ಲಿ ಒಟ್ಟು ಮೂರು ರಾಕೆಟ್‌ಗಳನ್ನು ನ್ಯೂ ಮೆಕ್ಸಿಕೊದ ಲಾಸ್ ಕ್ರೂಸಸ್‌ನಲ್ಲಿರುವ ನಾಸಾದ ವೈಟ್ ಸ್ಯಾಂಡ್ಸ್ ಪರೀಕ್ಷಾ ಕೇಂದ್ರದಿಂದ ಕಳುಹಿಸಲಾಗುತ್ತದೆ. ಅದೇ ಕ್ಷಣದಲ್ಲಿ ಚಂದ್ರನು ಸೂರ್ಯ ಮತ್ತು ಭೂಮಿಯ ನಡುವೆ ಹಾದುಹೋದಾಗ, ಆಕರ್ಷಣೀಯ ಬೆಂಕಿಯ ಉಂಗುರ ನಿರ್ಮಾಣವಾಗುತ್ತದೆ. ಗ್ರಹಣದ ಸಮಯದಲ್ಲಿ ಮೇಲಿನ ವಾತಾವರಣವು ಹೇಗೆ ಬದಲಾಗುತ್ತದೆ ಎಂಬುದನ್ನು ತಿಳಿಯುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ವಿಶೇಷವಾಗಿ ಬೆಳಕಿನಲ್ಲಿ ಹಠಾತ್ ಕಡಿತವಾದ ಕ್ಷಣದಲ್ಲಿ ಏನೆಲ್ಲ ಮಾರ್ಪಾಡುಗಳು ಸಂಭವಿಸುತ್ತವೆ ಎಂಬುದನ್ನು ಅಧ್ಯಯನ ಮಾಡಲಾಗುವುದು.

ಸೂರ್ಯಗ್ರಹಣ ಸಂಭವಿಸಿದಾಗ ಅದು ಭೂಮಿಯ ಮೇಲಿನ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಗಳಿಗೆ ಕಾರಣವಾಗುತ್ತದೆ. ಈ ಬದಲಾವಣೆಗಳು ಗಾಳಿಯಲ್ಲಿ ಮತ್ತು ನೆಲದ ಮೇಲೆ ರೇಡಿಯೊ ಸಂವಹನದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಹೊಂದಿವೆ.

lokesh

Recent Posts

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

20 mins ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

60 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

1 hour ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

2 hours ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

2 hours ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

2 hours ago