ನವದೆಹಲಿ : ಈ ಬಾರಿಯ ಸೂರ್ಯಗ್ರಹಣ ತುಸು ಹೆಚ್ಚೇ ಮಹತ್ವ ಹೊಂದಿದೆ. ಎಕೆಂದರೆ ಅಂದು ಅಂದರೆ ಅಕ್ಟೋಬರ್ 14 ರಂದು ಶನಿವಾರ ಅಮೆರಿಕದ ನಾಸಾ ಸಂಸ್ಥೆಯ ಖಗೋಳ ವಿಜ್ಞಾನಿಗಳು ಸೂರ್ಯನತ್ತ ತ್ರಿವಳಿ ರಾಕೆಟ್ಗಳನ್ನು ಹಾರಿಸಲಿದ್ದಾರೆ. ಇಲ್ಲಿ ಹೆಮ್ಮೆಯ ಸಂಗತಿಯೆಂದರೆ ಭಾರತೀಯ ಮೂಲದ ವಿಜ್ಞಾನಿ ಡಾ. ಆರೋಹ್ ಬರ್ಜತ್ಯಾ ಈ ಯೋಜನೆಯ ಸಾರಥ್ಯ ವಹಿಸಿದ್ದಾರೆ.
ಪ್ರಸ್ತುತ ಅವರು ಇಂಜಿನಿಯರಿಂಗ್ ಭೌತಶಾಸ್ತ್ರದ ಪ್ರಾಧ್ಯಾಪಕ ಮತ್ತು ಫ್ಲೋರಿಡಾದ ಎಂಬ್ರಿ-ರಿಡಲ್ ಏರೋನಾಟಿಕಲ್ ವಿಶ್ವವಿದ್ಯಾನಿಲಯದ ಬಾಹ್ಯಾಕಾಶ ಮತ್ತು ವಾತಾವರಣದ ಉಪಕರಣ ಪ್ರಯೋಗಾಲಯದ ನಿರ್ದೇಶಕರಾಗಿದ್ದಾರೆ. ಡಾ ಆರೋಹ್ ಬರ್ಜತ್ಯಾ ಅವರು ಬಹು-ಸಂಸ್ಥೆಗಳ ನಾಸಾ ರಾಕೆಟ್ ಮಿಷನ್ ಅನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಅಯಾನುಗೋಳ ಎಂದೂ ಕರೆಯಲ್ಪಡುವ ನಮ್ಮ ಮೇಲಿನ ವಾತಾವರಣದ ಮೇಲೆ ಗ್ರಹಣಗಳ ಪರಿಣಾಮಗಳನ್ನು ಅಧ್ಯಯನ ಮಾಡಲು ವಾರ್ಷಿಕ ಸೂರ್ಯಗ್ರಹಣದ ಸಮಯದಲ್ಲಿ ಈ ಮಹತ್ವದ ಯೋಜನೆ ಕೈಗೊಳ್ಳಲಾಗಿದೆ.
ಅಕ್ಟೋಬರ್ 14, 2023 ರಂದು ಘಟಿಸುವ ಗ್ರಹಣವು ವಾರ್ಷಿಕ ಸೂರ್ಯಗ್ರಹಣವಾಗಿದ್ದು, ಅದನ್ನು ಬೆಂಕಿಯ ಉಂಗುರ ಎಂದೂ ಕರೆಯುತ್ತಾರೆ. ಪ್ರಮುಖವಾಗಿ ಅಮರಿಕ, ಮೆಕ್ಸಿಕೊ ಮತ್ತು ದಕ್ಷಿಣ ಮತ್ತು ಮಧ್ಯ ಅಮೆರಿಕದ ಹಲವು ದೇಶಗಳಲ್ಲಿ ಗೋಚರಿಸುತ್ತದೆ.
ವಿಜ್ಞಾನಿ ಆರೋಹ್ ಬರ್ಜತ್ಯಾ ಅವರ ಈ ರಾಕೆಟ್ ಯೋಜನೆಯ ಪ್ರಧಾನ ವಿಷಯ ಎಕ್ಲಿಪ್ಸ್ ಪಾತ್ ಸುತ್ತಲ ವಾತಾವರಣದ ಪ್ರಕ್ಷುಬ್ಧತೆಗಳನ್ನು ಅಧ್ಯಯನ ಮಾಡುವುದಾಗಿದೆ. ಈ ಯೋಜನೆಯಲ್ಲಿ ಒಟ್ಟು ಮೂರು ರಾಕೆಟ್ಗಳನ್ನು ನ್ಯೂ ಮೆಕ್ಸಿಕೊದ ಲಾಸ್ ಕ್ರೂಸಸ್ನಲ್ಲಿರುವ ನಾಸಾದ ವೈಟ್ ಸ್ಯಾಂಡ್ಸ್ ಪರೀಕ್ಷಾ ಕೇಂದ್ರದಿಂದ ಕಳುಹಿಸಲಾಗುತ್ತದೆ. ಅದೇ ಕ್ಷಣದಲ್ಲಿ ಚಂದ್ರನು ಸೂರ್ಯ ಮತ್ತು ಭೂಮಿಯ ನಡುವೆ ಹಾದುಹೋದಾಗ, ಆಕರ್ಷಣೀಯ ಬೆಂಕಿಯ ಉಂಗುರ ನಿರ್ಮಾಣವಾಗುತ್ತದೆ. ಗ್ರಹಣದ ಸಮಯದಲ್ಲಿ ಮೇಲಿನ ವಾತಾವರಣವು ಹೇಗೆ ಬದಲಾಗುತ್ತದೆ ಎಂಬುದನ್ನು ತಿಳಿಯುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ವಿಶೇಷವಾಗಿ ಬೆಳಕಿನಲ್ಲಿ ಹಠಾತ್ ಕಡಿತವಾದ ಕ್ಷಣದಲ್ಲಿ ಏನೆಲ್ಲ ಮಾರ್ಪಾಡುಗಳು ಸಂಭವಿಸುತ್ತವೆ ಎಂಬುದನ್ನು ಅಧ್ಯಯನ ಮಾಡಲಾಗುವುದು.
ಸೂರ್ಯಗ್ರಹಣ ಸಂಭವಿಸಿದಾಗ ಅದು ಭೂಮಿಯ ಮೇಲಿನ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಗಳಿಗೆ ಕಾರಣವಾಗುತ್ತದೆ. ಈ ಬದಲಾವಣೆಗಳು ಗಾಳಿಯಲ್ಲಿ ಮತ್ತು ನೆಲದ ಮೇಲೆ ರೇಡಿಯೊ ಸಂವಹನದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಹೊಂದಿವೆ.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…