BREAKING NEWS

ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ: ಭರ್ತಿಯಾದ ತ್ರಿವೇಣಿ ಸಂಗಮ!

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ.

ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ ತ್ರಿವೇಣಿ ಸಂಗಮದಲ್ಲಿ ಹೆಚ್ಚು ನೀರು ಹರಿಯುತ್ತಿದೆ.

ಭಾಗಮಂಡಲ ತಲಕಾವೇರಿಗೆ ಭಕ್ತಾದಿಗಳ ಸಂಖ್ಯೆ ಇಂದು ಬೆಳಿಗ್ಗೆ ಕ್ಷಿಣಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಅಭಿವೃದ್ಧಿಪಡಿಸಲಾದ ಉದ್ಯಾನವನ ಸಂಪೂರ್ಣವಾಗಿ ಜಲಾವೃತ ವಾಗಿದೆ.

ನಾಪೋಕ್ಲು- ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ನಿರ್ಮಾಣದಿಂದ ಸಂಪರ್ಕ ಕಡಿತದಿಂದ ಮುಕ್ತಿ ಸಿಕ್ಕಿದೆ.

ಜಿಲ್ಲೆಯ ನದಿಪಾತ್ರದ ನಿವಾಸಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಜಿಲ್ಲಾಡಳಿತದಿಂದ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

12 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

38 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

59 mins ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಬೆಚ್ಚನೆಯ ಉಡುಪು ಒದಗಿಸಿ

ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…

2 hours ago